ಆ್ಯಪ್ನಗರ

ಬಸ್‌ ಕಂಡಕ್ಟರ್‌ ಆತ್ಮಹತ್ಯೆಗೆ ಯತ್ನ: ಅಧಿಕಾರಿಗಳ ವಿರುದ್ಧ ದೂರು

ದುರುದ್ದೇಶದಿಂದ ಅಧಿಕಾರಿಗಳು ತನ್ನನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ ಎಂದು ಆರೋಪಿಸಿ ರಾಮನಾಥಪುರ ಡಿಫೋ ಬಸ್‌ ಕಂಡೆಕ್ಟರ್‌ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿ ದೂರಿನ ಅನ್ವಯ ಗೊರೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vijaya Karnataka 10 Dec 2018, 5:00 am
ಹಾಸನ: ದುರುದ್ದೇಶದಿಂದ ಅಧಿಕಾರಿಗಳು ತನ್ನನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ ಎಂದು ಆರೋಪಿಸಿ ರಾಮನಾಥಪುರ ಡಿಫೋ ಬಸ್‌ ಕಂಡೆಕ್ಟರ್‌ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿ ದೂರಿನ ಅನ್ವಯ ಗೊರೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Vijaya Karnataka Web bus conductor attempts suicide complaint against officials
ಬಸ್‌ ಕಂಡಕ್ಟರ್‌ ಆತ್ಮಹತ್ಯೆಗೆ ಯತ್ನ: ಅಧಿಕಾರಿಗಳ ವಿರುದ್ಧ ದೂರು


ರಾಮು ಆತ್ಮಹತ್ಯೆಗೆ ಯತ್ನಿಸಿದ್ದು, ಡಿ.6ರಂದು ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಮನಾಥಪುರ ಡಿಪೋ ಬಸ್‌ ಕಂಡಕ್ಟರ್‌ ರಾಮು ಅಕ್ಟೋಬರ್‌ನಲ್ಲಿ ಬಸ್‌ ತಪಾಸಣೆ ಮಾಡಿದ ಅಧಿಕಾರಿಗಳು ಪ್ರಯಾಣಿಕರಿಗೆ ಟಿಕೆಟ್‌ ನೀಡಿಲ್ಲ ಎಂದು ಆರೋಪಿಸಿ ನೀಡಿದ ವರದಿ ಅನ್ವಯ ಅಮಾನತು ಮಾಡಿ ವಿಚಾರಣೆ ನಡೆಸಲಾಗುತ್ತಿತ್ತು. ಪ್ರಕರಣದ ವಿಚಾರಣೆ ಹಂತದಲ್ಲಿ ಡಿ.6ರಂದು ರಾಮು ತನ್ನ ತವರಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಕ್ಕೆ ಅಧಿಕಾರಿಗಳ ಕಿರುಕುಳ ಕಾರಣ ಎಂದು ಅವರ ಪತ್ನಿ ದೀಪಾ ಡಿ.7ರಂದು ಗೊರೂರು ಪೊಲೀಸರಿಗೆ ದೂರು ನೀಡಿದ್ದಾರೆ.

2011ರಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರ ಸಹೋದರ ಮಧು ಎಂಬಾತ ಟಿಕೆಟ್‌ ಪಡೆಯದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ಕಂಡಕ್ಟರ್‌ ರಾಮು ಆಕ್ಷೇಪ ವ್ಯಕ್ತಪಡಿಸಿದ್ದು, ತಾನು ಅಧಿಕಾರಿ ಸಹೋದರ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಡಿಪೋಗೆ ಬಸ್‌ ಕೊಂಡೊಯ್ದು ನಿಲ್ಲಿಸಿದ್ದರು. ಅಂದು ಟಿಕೆಟ್‌ ಪಡೆಯದೆ ಪ್ರಯಾಣದ ಆರೋಪದ ಹಿನ್ನೆಲೆಯಲ್ಲಿ ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಅರಕಲಗೂಡು ನ್ಯಾಯಾಲಯದಲ್ಲಿ ವಿಚಾರಣೆ ಅಂತಿಮ ಹಂತದಲ್ಲಿದೆ ಎನ್ನಲಾಗಿದೆ.

ಈ ಎಲ್ಲ ಬೆಳವಣಿಗೆ ನಡುವೆ 2018ರ ನ.23 ರಂದು ಬಸ್‌ತಪಾಸಣೆ ನಡೆಸಿದ ತಪಾಸಣಾ ಅಧಿಕಾರಿಗಳು ಪ್ರಯಾಣಿಕರಿಗೆ ಟಿಕೆಟ್‌ ನೀಡಿಲ್ಲ ಎಂದು ಆರೋಪ ಹೊರಿಸಿ, ನ.29 ರಂದು ಅಮಾನತು ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ನೊಂದು ತನ್ನ ಗೊರೂರಿನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

------------

ಅಧಿಕಾರಿಗಳ ಕಿರುಕುಳವೋ ಇಲ್ಲವೇ ಪ್ರಯಾಣಿಕರಿಗೆ ಟಿಕೆಟ್‌ ನೀಡದೆ ಅಮಾನತುಗೊಂಡಿದ್ದರಿಂದ ನೊಂದು ಆತ್ಮಹತ್ಯೆ ಯತ್ನ ಮಾಡಿದ್ದಾರೆಯೇ ಎಂಬ ಕುರಿತು ವಿಚಾರಣೆ ನಡೆಯಬೇಕಿದೆ. ರಾಮು ಚೇತರಿಸಿಕೊಳ್ಳುತ್ತಿದ್ದು, ಆ ಬಳಿಕ ಹೇಳಿಕೆ ಪಡೆಯಬೇಕಿದೆ.
-ಪ್ರಕಾಶ್‌ಗೌಡ ಎಸ್‌ಪಿ ಹಾಸನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ