ಆ್ಯಪ್ನಗರ

ನೇಣು ಬಿಗಿದು ಕ್ಯಾಬ್‌ ಚಾಲಕ ಆತ್ಮಹತ್ಯೆ

ತಾಲೂಕಿನ ಆಲದಹಳ್ಳಿ ಕ್ರಾಸ್‌ ಬಳಿ ಮರವೊಂದಕ್ಕೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijaya Karnataka Web 25 Jul 2018, 5:00 am
ಹೊಳೆನರಸೀಪುರ : ತಾಲೂಕಿನ ಆಲದಹಳ್ಳಿ ಕ್ರಾಸ್‌ ಬಳಿ ಮರವೊಂದಕ್ಕೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
Vijaya Karnataka Web cab driver suicide
ನೇಣು ಬಿಗಿದು ಕ್ಯಾಬ್‌ ಚಾಲಕ ಆತ್ಮಹತ್ಯೆ


ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿರುವ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಸ್ಲೆಹಳ್ಳಿಯ ನಿವಾಸಿ ಚನ್ನೇಶ್‌(40) ಮೃತರು.

ಮಂಗಳವಾರ ಬೆಳಗ್ಗೆ ಯಾರೂ ಇಲ್ಲದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಅವರ ಬಳಿ ಇದ್ದ ದಾಖಲೆಗಳಲ್ಲಿ ಅವರ ವಿಳಾಸ ಪತ್ತೆಯಾಗಿದೆ.

ಹೊಳೆನರಸೀಪುರ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಸಂಬಂಧಿಕರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ