ಆ್ಯಪ್ನಗರ

ಜಮ್ಮು ,ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಜಿಲ್ಲಾದ್ಯಂತ ಸಂಭ್ರಮಾಚರಣೆ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿ ಜಿಲ್ಲೆಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

Vijaya Karnataka 6 Aug 2019, 5:00 am
ಹಾಸನ : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿ ಜಿಲ್ಲೆಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
Vijaya Karnataka Web HSN-HSN5CRP7


ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಜೆ ಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ 370ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು, ಕಾಶ್ಮೀರ ದೇಶದ ಅವಿಭಾಜ್ಯ ಅಂಗ ಎಂದು ಘೋಷಿಸಿರುವುದು ಭಾರತೀಯರಲ್ಲಿ ಹರ್ಷ ತಂದ ಶುಭಸುದ್ದಿ ಎಂದರು.

ದೇಶದ ತೆರಿಗೆ ಹಣ ಜಮ್ಮು, ಕಾಶ್ಮೀರದ ಅಭಿವೃದ್ಧಿಗೂ ಬಳಕೆಯಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಚನವನ್ನು ಈಡೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಸರಕಾರ ದೃಢ ತೀರ್ಮಾನ ಕೈಗೊಂಡು ನುಡಿದಂತೆ ನಡೆದುಕೊಂಡಿದೆ ಎಂದು ಅಭಿನಂದಿಸಿದರು.

ಜಿಲ್ಲಾ ಬಿಜೆಪಿವತಿಯಿಂದ ಸಂಭ್ರಮಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಗಿತ್ತಾದರೂ, ಮಳೆಯ ಅಡ್ಡಿಯ ಕಾರಣ ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಕಾರ್ಯಕ್ರಮ ರದ್ದುಪಡಿಸಲಾಯಿತು.

ಚನ್ನರಾಯಪಟ್ಟಣದಲ್ಲಿ ಯುವಬ್ರಿಗೇಡ್‌ ವತಿಯಿಂದ ಕೆ.ಆರ್‌.ವೃತ್ತದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಹೊಳೆನರಸೀಪುರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ