ಆ್ಯಪ್ನಗರ

ಹಾಸನದಲ್ಲಿ 30 ಅಡಿ ಗುಂಡಿಗೆ ಬಿದ್ದ ಕಾರು, ಪ್ರಾಣಾಪಾಯದಿಂದ ಚಾಲಕ ಪಾರು!

ಬೈರಾಪುರದಲ್ಲಿ ಹಾಸನ ಮಂಗಳೂರು ಆಲೂರು ಹಾಗೂ ಮಗ್ಗೆ ರಾಯರಕೊಪ್ಪಲುಗಳಿಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಹಾಗೂ ಕೆಳ ರಸ್ತೆ ನಿರ್ಮಾಣವಾಗುತ್ತಿದ್ದು ವಾಹನ ಸವಾರರಿಗೆ ಯಾವುದೇ ರೀತಿಯ ಸೂಚನಾ ಫಲಕ ಮತ್ತು ತಡೆಗೋಡೆ ನಿರ್ಮಾಣ ಮಾಡದಿರುವುದೇ ಘಟನೆಗೆ ಕಾರಣವಾಗಿದೆ.

Vijaya Karnataka Web 31 Mar 2021, 4:52 pm
ಹಾಸನ: ಚಲಿಸುತ್ತಿದ್ದ ಕಾರೊಂದು 30 ಅಡಿ ಗುಂಡಿಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಮೀಪ ನಡೆದಿದೆ. ಆಲೂರು ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯ ಅವೈಜ್ಞಾನಿಕತೆಯಿಂದ ಈ ದುರ್ಘಟನೆ ಸಂಭವಿಸಿದೆ.
Vijaya Karnataka Web ಕಾರು


ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಮಂಜುನಾಥ್ ಎಂಬುವರು ಹಾಸನಕ್ಕೆ ಆಲೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಬೈರಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಕೆಳ ಅಂತಸ್ತಿನ ರಸ್ತೆ ಕಾಮಗಾರಿಗೆಂದು ಸುಮಾರು 30 ಅಡಿ ಆಳದ ಗುಂಡಿ ನಿರ್ಮಾಣ ಮಾಡಿದ್ದು ಗುಂಡಿಯ ಮೇಲ್ಭಾಗದಿಂದ ಕೆಳಗೆ ಬಿದ್ದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ.

ಇನ್ನು ಕಾರಿನ ಚಾಲಕ ಹಾಗೂ ಮಾಲೀಕ ಮಂಜುನಾಥ್ ಗೆ ಗಂಭೀರ ಗಾಯಗಳಾಗಿದ್ದು ಅವರನ್ನ ಆಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಲೂರು ತಾಲೂಕಿನ ಬೈರಾಪುರದಲ್ಲಿ ಹಾಸನ ಮಂಗಳೂರು ಆಲೂರು ಹಾಗೂ ಮಗ್ಗೆ ರಾಯರಕೊಪ್ಪಲುಗಳಿಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಹಾಗೂ ಕೆಳ ರಸ್ತೆ ನಿರ್ಮಾಣವಾಗುತ್ತಿದ್ದು ವಾಹನ ಸವಾರರಿಗೆ ಯಾವುದೇ ರೀತಿಯ ಸೂಚನಾ ಫಲಕ ಮತ್ತು ತಡೆಗೋಡೆ ನಿರ್ಮಾಣ ಮಾಡದಿರುವುದೇ ಘಟನೆಗೆ ಕಾರಣವಾಗಿದೆ.

ಕಾರು ರಸ್ತೆಯಿಂದ ಗುಂಡಿಗೆ ಬಿದ್ದ ಬಳಿಕ ಸ್ಥಳೀಯರು ತಕ್ಷಣ ಗಾಯಾಳುವನ್ನು ರಕ್ಷಣೆ ಮಾಡುವ ಕಾರ್ಯ ಮಾಡಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗುತ್ತಿಗೆ ಪಡೆದಿರುವ ಸಂಸ್ಥೆಯ ವಿರುದ್ಧ ಸಾರ್ವಜನಿಕರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ