ಆ್ಯಪ್ನಗರ

ಕಾರಿಗೆ ಬಸ್‌ ಡಿಕ್ಕಿಯಾಗಿ ಯುವಕ ಸಾವು, ಇಬ್ಬರಿಗೆ ಗಾಯ

ಪಟ್ಟಣ ಸಮೀಪದ ಬೆಂಗಳೂರು-ಮಂಗಳೂರು (ಎನ್‌ಎಚ್‌-75) ನಡುವಿನ ರಾಷ್ಟ್ರೀಯ ಹೆದ್ದಾರಿಯ ಬಾಳೆಗದ್ದೆ-ಕೊಲ್ಲಹಳ್ಳಿ ಸಮೀಪದ ರಸ್ತೆ ತಿರುವಿನಲ್ಲಿಶುಕ್ರವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ (ಸ್ಲೀಪರ್‌ ಕೋಚ್‌) ಬಸ್‌ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Vijaya Karnataka 26 Oct 2019, 5:00 am
ಪಟ್ಟಣ ಸಮೀಪದ ಬೆಂಗಳೂರು-ಮಂಗಳೂರು (ಎನ್‌ಎಚ್‌-75) ನಡುವಿನ ರಾಷ್ಟ್ರೀಯ ಹೆದ್ದಾರಿಯ ಬಾಳೆಗದ್ದೆ-ಕೊಲ್ಲಹಳ್ಳಿ ಸಮೀಪದ ರಸ್ತೆ ತಿರುವಿನಲ್ಲಿಶುಕ್ರವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ (ಸ್ಲೀಪರ್‌ ಕೋಚ್‌) ಬಸ್‌ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
Vijaya Karnataka Web car mishap one killed
ಕಾರಿಗೆ ಬಸ್‌ ಡಿಕ್ಕಿಯಾಗಿ ಯುವಕ ಸಾವು, ಇಬ್ಬರಿಗೆ ಗಾಯ


ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಬೆಂಗಳೂರಿನ ವಿಜಯನಗರ ನಿವಾಸಿ ವಿಕಾಸ್‌(24) ಮೃತರು. ಅದೇ ಬಡಾವಣೆಯ ನಿವಾಸಿಗಳಾದ ಸುಷ್ಮಾ(22) ಹಾಗೂ ಮಂಜು(24) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಪಟ್ಟಣದ ಸರಕಾರಿ ಕ್ರಾಫರ್ಡ್‌ ಆಸ್ಪತ್ರೆಯಲ್ಲಿತುರ್ತು ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಆಸ್ಪತ್ರೆಗೆ ಸಾಗಿಸಲಾಗಿದೆ. ಹಾಸನ ಕಡೆಯಿಂದ ಬರುತ್ತಿದ್ದ ಕಾರಿಗೆ, ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಬಸ್‌ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಹೆದ್ದಾರಿ ಸಂಚಾರ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಅಸ್ತವ್ಯಸ್ತವಾಗಿತ್ತು. ಪಟ್ಟಣ ಪೊಲೀಸ್‌ ಠಾಣೆ ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಿದರು. ಪಟ್ಟಣ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ