ಆ್ಯಪ್ನಗರ

ಬ್ರಾಹ್ಮಣ ಸಮುದಾಯ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಹೆಚ್ಚುವರಿ ಅನುದಾನ

ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಈಗಾಗಲೇ 25 ಕೋಟಿ ರೂ. ನೀಡಿದ್ದು ಹೆಚ್ಚುವರಿಯಾಗಿ 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ನೀಡಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

Vijaya Karnataka 28 Jan 2019, 5:00 am
ಚನ್ನರಾಯಪಟ್ಟಣ( ದಿ.ಎಚ್‌.ಎಸ್‌.ಕೃಷ್ಣಮೂರ್ತಿ ಮತ್ತು ದಿ.ಎ.ವೆಂಕಟಸುಬ್ಬಯ್ಯವೇದಿಕೆ): ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಈಗಾಗಲೇ 25 ಕೋಟಿ ರೂ. ನೀಡಿದ್ದು ಹೆಚ್ಚುವರಿಯಾಗಿ 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ನೀಡಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.
Vijaya Karnataka Web channarayapatana taluk brahamin summit
ಬ್ರಾಹ್ಮಣ ಸಮುದಾಯ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಹೆಚ್ಚುವರಿ ಅನುದಾನ


ನವೋದಯ ವಿದ್ಯಾಸಂಘದ ಆವರಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ತಾಲೂಕು ಬ್ರಾಹ್ಮಣ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾವೇಶ ನಡೆಸುತ್ತಿರುವುದು ಸಂತಸದ ಸಂಗತಿಯಾಗಿದ್ದು ಈ ಸಮಾಜದ ಕೆಲಸಕ್ಕೆ ಸದಾ ಸಿದ್ಧವಿದ್ದೇವೆ. ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಭವನ ನಿರ್ಮಿಸಲು ಈ ಸರಕಾರದಲ್ಲಿ ಅವಕಾಶ ಮಾಡಿಕೊಡಲಾಗುವುದು. ನಮ್ಮ ಕುಟುಂಬಕ್ಕೆ ಶೃಂಗೇರಿ ಶ್ರೀಗಳ ಆಶೀರ್ವಾದವಿದ್ದು ಸದಾಕಾಲ ನಮ್ಮ ಕುಟುಂಬ ಅವರ ಸೇವೆಗೆ ಸಿದ್ಧವಾಗಿದೆ. ಬೆಂಗಳೂರಿನ ಶೃಂಗೇರಿ ಮಠಕ್ಕೆ 5 ಕೋಟಿ ರೂ. ನೀಡಿದ್ದು ಶಂಕರ ಆಸ್ಪತ್ರೆಗೆ 10 ಕೋಟಿ ರೂ. ನೀಡಲಾಗಿದೆ. ಆಸ್ಪತ್ರೆಯಲ್ಲಿ 100 ವೆಂಟಿಲೇಟರ್‌ಗಳನ್ನು ಅಳವಡಿಸಲಾಗುವುದು ಎಂದರು.

ಸಮ್ಮೇಳನದ ಅಂಗವಾಗಿ ಸಚಿವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ತಾಲೂಕು ಅಧ್ಯಕ್ಷ ಡಿ.ಎಲ್‌.ತಿಮ್ಮಪ್ಪಯ್ಯ, ಕಾರ‍್ಯದರ್ಶಿ ಎ.ಎಸ್‌.ವೆಂಕಟರಮಣ, ಪುರಸಭಾ ಸದಸ್ಯೆ ಬನಶಂಕರಿ, ಮಾಜಿ ಸದಸ್ಯ ಸಿ.ಎನ್‌.ಸುಬ್ರಹ್ಮಣ್ಯ ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ