ಆ್ಯಪ್ನಗರ

ಸಹಕಾರ ಸಂಘಗಳ ಬಲವರ್ಧನೆ ಅಗತ್ಯ

ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನ ಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಟೇಲ್ ಶಿವರಾಂ ಹೇಳಿದರು.

Vijaya Karnataka 15 Nov 2017, 5:15 am
ಹಾಸನ: ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನ ಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಟೇಲ್ ಶಿವರಾಂ ಹೇಳಿದರು.
Vijaya Karnataka Web co operative societies need reinforcement
ಸಹಕಾರ ಸಂಘಗಳ ಬಲವರ್ಧನೆ ಅಗತ್ಯ


ನಗರದ ಎಚ್‌ಡಿಸಿಸಿ ಬ್ಯಾಂಕ್‌ನ ಎಚ್.ಡಿ. ದೇವೇಗೌಡ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಸಹಕಾರ ಒಕ್ಕೂಟ, ರಾಜ್ಯ ಸಹಕಾರ ಮಹಾಮಂಡಳ, ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಹಾಸನ ನಗರ ಮತ್ತು ತಾಲೂಕಿನ ಎಲ್ಲಾ ಸಹಕಾರ ಸಂಸ್ಥೆಗಳು ಹಾಗೂ ಸಹಕಾರ ಆಡಳಿತ ಮತ್ತು ಲೆಕ್ಕ ಪರಿಶೋಧನ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ 64 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಂಘ, ಸಂಸ್ಥೆಗಳು ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸುವ ಮೂಲಕ ಹಲವು ರೈತರಿಗೆ, ಮಹಿಳೆಯರಿಗೆ ಸಹಕಾರಿಯಾಗಿವೆ. ಮಹಿಳಾ ಸಂಘ, ಸ್ತ್ರಿ ಶಕ್ತಿ ಸಂಘಗಳ ಮೂಲಕ ಮಹಿಳೆಯರು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪುರುಷರಿಗಿಂತ ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರು ಈ ಸಹಕಾರಿ ಸಂಘಗಳ ಜತೆ ಭಾಗವಹಿಸಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಸಹಕಾರ ಒಕ್ಕೂಟ(ಪ್ರಭಾರ) ಅಧ್ಯಕ್ಷ ಪಿ.ಎಲ್. ನಿಂಗರಾಜು ಮಾತನಾಡಿ, ಜಿಲ್ಲೆಯ 7 ತಾಲೂಕಿನಲ್ಲಿ ಈ ಸಹಕಾರ ಸಪ್ತಾಹವನ್ನು ಆಚರಿಸುತ್ತಿದ್ದು, ಒಂದೊಂದು ದಿನವು ಒಂದೊಂದು ಮಹತ್ವವನ್ನು ಹೊಂದಿದೆ. ಸಹಕಾರ ಸಂಘ ಗಳಿಂದ ಸಾಕಷ್ಟು ಮಂದಿ ಸಹಾಯ ಪಡೆಯುತ್ತಿದ್ದು ಸಮಾಜಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದೆ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೆ. ಸತೀಶ್ , ರಾಜ್ಯ ಸಹಕಾರ ಮಹಾಮಂಡಳಿ ಮಾಜಿ ನಿರ್ದೇಶಕ ಆರ್.ಟಿ. ದ್ಯಾವೇಗೌಡ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಜಯರಾಂ, ಜಿಲ್ಲಾ ಸಹಕಾರ ಒಕ್ಕೂಟ ನಿರ್ದೇಶಕ ಎಚ್.ಜೆ. ಗಣೇಶ್, ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಲೋಕೇಶ್, ಸಹಕಾರ ಹಾಲು ಒಕ್ಕೂಟ ವ್ಯವಸ್ಥಾಪಕ ಜೈ ಪ್ರಕಾಶ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ