ಚನ್ನರಾಯಪಟ್ಟಣ: ತಾಲೂಕಿನ ಗೌಡಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ರೈತರ ಹಣದ ದುರುಪಯೋಗದ ಹಿನ್ನೆಲೆಯಲ್ಲಿ ಸಂಘದ ಕಾರ್ಯದರ್ಶಿ ಮಂಜೇಗೌಡ ಅವರನ್ನು ಅಮಾನತಿನಲ್ಲಿಟ್ಟು ವಿಚಾರಣೆಗೆ ಒಳಪಡಿಸುವ ನಿರ್ಧಾರವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.
ಸಂಘದ ಕಚೇರಿಯಲ್ಲಿ ಅಧ್ಯಕ್ಷ ಜಿ.ಎಂ.ರಮೇಶ್ ಅಧ್ಯಕ್ಷ ತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಎಲ್ಲ ನಿರ್ದೇಶಕರು ಹಾಜರಿದ್ದು, ರೈತರ ಹೆಸರಿನಲ್ಲಿ ಸಾಲ ಮಂಜೂರು ಮಾಡುವ ವೇಳೆ ಹಾಗೂ ಸಾಲ ಮನ್ನಾ ಸಮಯದಲ್ಲೂ ಹಣ ದುರುಪಯೋಗ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಮೇಲ್ವಿಚಾರಕ ಅಭಿಲಾಷ್ ತಿಳಿಸಿದ್ದಾರೆ.
ವಂಚನೆಗೊಳಗಾಗಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಮಾತುಕೊಟ್ಟಿದ್ದ ಕಾರ್ಯದರ್ಶಿ ಇಂದಿನಿಂದಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ಅವರನ್ನು ವಿಚಾರಣೆಗೊಳಪಡಿಸುವಂತೆಯೂ ನಿರ್ದೇಶಕ ಮಂಡಳಿ ಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದೆ.
ಗೌಡಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಗುರುವಾರ ಹಳೇಬೆಳಗೊಳ ಹಾಗೂ ಗೌಡಗೆರೆ ಗ್ರಾಮದ ಫಲಾನುಭವಿಗಳು ಸಂಘದ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕಿನಾದ್ಯಂತ ಇಂತಹ ಪ್ರಕರಣಗಳು ನಡೆದಿರುವ ಸಾಧ್ಯತೆಗಳಿದ್ದು, ಉನ್ನತಮಟ್ಟದ ತನಿಖೆ ನಡೆಸುವಂತೆಯೂ ಆಗ್ರಹಿಸಿದ್ದರು.
ಸಂಘದ ಕಚೇರಿಯಲ್ಲಿ ಅಧ್ಯಕ್ಷ ಜಿ.ಎಂ.ರಮೇಶ್ ಅಧ್ಯಕ್ಷ ತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಎಲ್ಲ ನಿರ್ದೇಶಕರು ಹಾಜರಿದ್ದು, ರೈತರ ಹೆಸರಿನಲ್ಲಿ ಸಾಲ ಮಂಜೂರು ಮಾಡುವ ವೇಳೆ ಹಾಗೂ ಸಾಲ ಮನ್ನಾ ಸಮಯದಲ್ಲೂ ಹಣ ದುರುಪಯೋಗ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಮೇಲ್ವಿಚಾರಕ ಅಭಿಲಾಷ್ ತಿಳಿಸಿದ್ದಾರೆ.
ವಂಚನೆಗೊಳಗಾಗಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಮಾತುಕೊಟ್ಟಿದ್ದ ಕಾರ್ಯದರ್ಶಿ ಇಂದಿನಿಂದಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ಅವರನ್ನು ವಿಚಾರಣೆಗೊಳಪಡಿಸುವಂತೆಯೂ ನಿರ್ದೇಶಕ ಮಂಡಳಿ ಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದೆ.
ಗೌಡಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಗುರುವಾರ ಹಳೇಬೆಳಗೊಳ ಹಾಗೂ ಗೌಡಗೆರೆ ಗ್ರಾಮದ ಫಲಾನುಭವಿಗಳು ಸಂಘದ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕಿನಾದ್ಯಂತ ಇಂತಹ ಪ್ರಕರಣಗಳು ನಡೆದಿರುವ ಸಾಧ್ಯತೆಗಳಿದ್ದು, ಉನ್ನತಮಟ್ಟದ ತನಿಖೆ ನಡೆಸುವಂತೆಯೂ ಆಗ್ರಹಿಸಿದ್ದರು.