ಆ್ಯಪ್ನಗರ

ಹಾಸನ: ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರು ಸಾಗಣೆ, ಆರೋಪಿ ಸೆರೆ

ಹಸುಗಳನ್ನು ಅಮಾನತ್ತುಪಡಿಸಿಕೊಂಡು ಹಾಗೂ ವಾಹನದ ಮಾಲೀಕ ಖುರೇಶಿ ಬಿನ್ ಫಾರುಖ್ ಖುರೇಶಿ, ಬೆಲವತ್ತಿ ಗ್ರಾಮ, ಕೆಸರೆ ಮೈಸೂರು. ವಿರುದ್ಧ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Vijaya Karnataka Web 6 Jan 2021, 8:42 pm
ಹಾಸನ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ ಮಾರನೇ ದಿನವೇ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಬಂಧಿತ ಆರೋಪಿಯಿಂದ 22 ಹೋರಿ ಕರುಗಳು, 6 ಎಮ್ಮೆ ಕರುಗಳು, 3 ಹೆಣ್ಣು ಹಸು ಕರುಗಳು, 6 ಎಮ್ಮೆಗಳು ಮತ್ತು 1 ಹಸುವನ್ನು ಹೊಳೆನರಸೀಪುರ ತಾಲೂಕು ಹಳ್ಳಿ ಮೈಸೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಮ್ರಾನ್ ಬಂಧಿತ ಆರೋಪಿ. ಮೈಸೂರು ಜಿಲ್ಲೆ ಬೆಲವತ್ತಿ ಗ್ರಾಮ, ಕೆಸರೆಯ ಆರೋಪಿ ಬು‘ವಾರ ಮುಂಜಾನೆ 3 ಗಂಟೆ ಸಮಯದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ಪತ್ತೆಹಚ್ಚಲಾಗಿದೆ.

ಪಿಎಸ್‌ಐ ಲಕ್ಷ್ಮಣ ಮತ್ತು ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ ಹೊಳೆನರಸೀಪುರ ವೃತ್ತ ನಿರೀಕ್ಷಕ ಅಶೋಕ್ ತಾಲೂಕಿನ ಓಡನಹಳ್ಳಿ ಮಾರ್ಗವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂದು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪರವಾನಿಗೆಲ್ಲದೆ ಅಕ್ರಮವಾಗಿ ಕೆಎ-13, ಬಿ-1903 ಐಷರ್ ಕಂಟೇನರ್ ವಾಹನ ತಡೆದು ವಿಚಾರಣೆ ಮಾಡಿದಾಗ ಅಕ್ರಮ ಬೆಳಕಿಗೆ ಬಂದಿದೆ.

ಹಸುಗಳನ್ನು ಅಮಾನತ್ತುಪಡಿಸಿಕೊಂಡು ಹಾಗೂ ವಾಹನದ ಮಾಲೀಕ ಖುರೇಶಿ ಬಿನ್ ಫಾರುಖ್ ಖುರೇಶಿ, ಬೆಲವತ್ತಿ ಗ್ರಾಮ, ಕೆಸರೆ ಮೈಸೂರು. ವಿರುದ್ಧ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ