ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ತಾಲೂಕಿನಾದ್ಯಂತ 8ನೇ ತರಗತಿಯ 1,694 ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ ಸೈಕಲ್‌ಗಳನ್ನು ವಿತರಣೆ ಮಾಡಲಾಗುವುದೆಂದು ಶಾಸಕ ಸಿ.ಎನ್.ಬಾಲಕಷ್ಣ ಹೇಳಿದರು.

Vijaya Karnataka 5 Feb 2019, 8:30 pm
ಚನ್ನರಾಯಪಟ್ಟಣ: ತಾಲೂಕಿನಾದ್ಯಂತ 8ನೇ ತರಗತಿಯ 1,694 ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ ಸೈಕಲ್‌ಗಳನ್ನು ವಿತರಣೆ ಮಾಡಲಾಗುವುದೆಂದು ಶಾಸಕ ಸಿ.ಎನ್.ಬಾಲಕಷ್ಣ ಹೇಳಿದರು.
Vijaya Karnataka Web cycle distribution at channarayapatna
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ


ಪಟ್ಟಣದ ನವೋದಯ ಪ್ರೌಢಶಾಲೆಯಲ್ಲಿ 146 ಅರ್ಹ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಿ ಮಾತನಾಡಿದರು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಈ ಸೌಲಭ್ಯ ನೀಡಲಾಗುತ್ತಿದೆ ಎಂದರು.

ಇರುವ ಇತಿಮಿತಿಯೊಳಗೆ ಈ ಸಂಸ್ಥೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬೇಕಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದ್ದು, ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಮಾಡಿ ಏಳಿಗೆಗೆ ಸಹಕಾರ ಪಡೆಯುವಂತೆ ಸರಕಾರವೇ ತಿಳಿಸಿದ್ದರೂ ಈ ನಿಟ್ಟಿನಲ್ಲಿ ಆಡಳಿತಮಂಡಳಿ ಏಕೆ ಮುಂದಾಗಿಲ್ಲವೆಂದು ಪ್ರಶ್ನಿಸಿದರು.

ಸಂಸ್ಥೆಯ ಏಳಿಗೆಗೆ ಈಗಾಗಲೇ 12 ಲಕ್ಷ ರೂ. ಅನುದಾನ ನೀಡಿದ್ದು ಮುಂದಿನ ವರ್ಷದಲ್ಲಿ 10 ಲಕ್ಷ ರೂ. ತನಕ ಹೆಚ್ಚುವರಿ ಅನುದಾನ ನೀಡಲಾಗುವುದು. ಸಂಸ್ಥೆಯ ಶೈಕ್ಷಣಿಕ ಪ್ರಗತಿಗೆ ಸದಾ ತಮ್ಮ ಸಹಕಾರವಿರುತ್ತದೆ. ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಶಾಸಕರು ವಿದ್ಯಾರ್ಥಿಗಳು ಉತ್ತಮ ನಡವಳಿಕೆಗಳನ್ನು ರೂಪಿಸಿಕೊಳ್ಳುವ ಮೂಲಕ ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಲಿತಾಂಶ ತನ್ನಿ. ಕ್ಷೇತ್ರಶಿಕ್ಷಣಾಧಿಕಾರಿಗಳು ಸಮರ್ಪಕ ನಿರ್ವಹಣೆಗೆ ಸಹಕಾರ ನೀಡಬೇಕು ಎಂದರು. ಕ್ಷೇತ್ರಶಿಕ್ಷಣಾಧಿಕಾರಿ ಎಚ್.ಕೆ.ಪುಷ್ಪಲತಾ, ಆಡಳಿತಮಂಡಳಿ ನಿರ್ದೇಶಕರುಗಳು ಹಾಗೂ ಪ್ರಾಂಶುಪಾಲ ಸುರೇಶ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ