ಆ್ಯಪ್ನಗರ

6 ತಾಲೂಕುಗಳಿಗೆ ರಜೆ ಘೋಷಣೆ

ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ಹೊರತುಪಡಿಸಿ ಆರು ತಾಲೂಕುಗಳ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಲೆನಾಡಿ ಪ್ರದೇಶಗಳಾದ ಸಕಲೇಶಪುರ, ಬೇಲೂರು, ಅರಕಲಗೂಡು ಹಾಗೂ ಆಲೂರು ಪ್ರದೇಶದ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕವಿಲ್ಲದೆ ಕತ್ತಲೆಯಲ್ಲಿಯೇ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Vijaya Karnataka 10 Aug 2019, 5:00 am
ಹಾಸನ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ಹೊರತುಪಡಿಸಿ ಆರು ತಾಲೂಕುಗಳ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Vijaya Karnataka Web HSN-HSN9KNR7


ಮಲೆನಾಡಿ ಪ್ರದೇಶಗಳಾದ ಸಕಲೇಶಪುರ, ಬೇಲೂರು, ಅರಕಲಗೂಡು ಹಾಗೂ ಆಲೂರು ಪ್ರದೇಶದ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕವಿಲ್ಲದೆ ಕತ್ತಲೆಯಲ್ಲಿಯೇ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ನೀರಿನ ತೀವ್ರತೆ ಹೆಚ್ಚಾಗಿರುವುದರಿಂದ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಜಿಲ್ಲಾಡಳಿತದ ವತಿಯಿಂದ ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದ್ದರೂ ಸಹ ಸಾವಿರಾರು ಜನರು ಈ ಭಾರಿ ಮಳೆಯಿಂದಾಗಿ ನಿರ್ಗತಿಕರಾಗುವ ಭಯದಲ್ಲಿ ಚಿಂತಾಕ್ರಾಂತರಾಗಿದ್ದಾರೆ.

ಈಗಾಗಲೇ ಸಕಲೇಶಪುರದ ಆಜಾದ್‌ ರಸ್ತೆ, ರಾಮನಾಥಪುರದ ಪ್ರಮುಖ ಬೀದಿಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರಲ್ಲದೆ, ಮಳೆಯ ಕಾಟ ತಾಳಲಾರದೆ ಮನೆಗಳಿಗೆ ನೀರು ನುಗ್ಗುತ್ತಿರುವುದರಿಂದ ಸಂಬಂಧಿಕರ ಮನೆಗೆ ಇಲ್ಲವೇ ಎತ್ತರದ ಪ್ರದೇಶಗಳಲ್ಲಿರುವ ಸ್ನೇಹಿತರ ಮನೆಗಳಿಗೆ ತೆರಳುತ್ತಿದ್ದಾರೆ.

ಜಿಲ್ಲಾಡಳಿತ ವತಿಯಿಂದ ತೆರಯಲಾಗಿರುವ ಕಾಳಜಿ ಕೇಂದ್ರಕ್ಕೆ ನೀರಿನಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲಾಗುತ್ತಿದ್ದು, ನಿರ್ಗತಿಕ ಕೇಂದ್ರದಲ್ಲಿ ಊಟದ ವ್ಯವಸ್ಥೆ ಹಾಗೂ ಹೊದಿಕೆ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಹಾಸನದ ಗೊರೂರು ರಸ್ತೆಯಲ್ಲಿರುವ ಬಿಟ್ಟಗೊಂಡನಹಳ್ಳಿ ಕೆರೆ ತುಂಬಿದ್ದು, ಕೊಡಿ ನೀರು ಹರಿದು ರಸ್ತೆ ಅಕ್ಕ ಪಕ್ಕ ಜಮೀನಿಗಳು ಜಲಾವೃತಗೊಂಡಿದ್ದು, ರಸ್ತೆಬದಿಯ ಅಂಗಡಿ ಮುಂಗಟುಗಳಿಗೆ ನೀರು ನುಗ್ಗುತ್ತಿದೆ.

ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸಕಲೇಶಪುರಕ್ಕೆ ಭೇಟಿ ನೀಡಿ ಪಟ್ಟಣದ ಅಜಾದ್‌ ರಸ್ತೆ, ನದಿ ಸುತ್ತ ಮುತ್ತಲ ಪ್ರದೇಶಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಅಕ್ರಂಪಾಷರೊಂದಿಗೆ ಚರ್ಚೆ ನಡೆಸಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪರವರ ಚರ್ಚಿಸಿ ಪರಿಹಾರಕ್ಕಾಗಿ ಒತ್ತಾಯಿಸುವುದಾಗಿ ಹೇಳಿದರು.

ಹೇಮಾವತಿ ಜಲಾಶದಿಂದ ನೀರು ಬಿಡುಗಡೆ: ಹೇಮಾವತಿ ಜಲಾಶಯದಿಂದ 60 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದೇ ರೀತಿ ಮಳೆ ಮುಂದುವರಿದರೆ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುವುದು ಎಂದು ಜಲಾಶಯದಲ್ಲಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮಳೆಯ ರುದ್ರನರ್ತಕ್ಕೆ ಜಿಲ್ಲೆಯ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇನ್ನೇನು ಅನಾಹುತ ಕಾದಿದೆಯೋ ಎಂದು ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ