ಆ್ಯಪ್ನಗರ

ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಿ: ರೇವಣ್ಣ ಒತ್ತಾಯ

ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಆತಂಕ ಪಡುತ್ತಿದ್ದು, ಅವರಿಗೆ ರಕ್ಷಣೆ ನೀಡಲು ಸರಕಾರ ಮುಂದಾಗ ಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.

ವಿಕ ಸುದ್ದಿಲೋಕ 21 Jul 2016, 5:15 am
ಹಾಸನ: ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಆತಂಕ ಪಡುತ್ತಿದ್ದು, ಅವರಿಗೆ ರಕ್ಷಣೆ ನೀಡಲು ಸರಕಾರ ಮುಂದಾಗ ಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.
Vijaya Karnataka Web defense officials to be honest revanna insist
ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಿ: ರೇವಣ್ಣ ಒತ್ತಾಯ


‘‘ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಬಳಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿ ದ್ದು, ಸಿಎಂ ಸಿದ್ಧರಾಮಯ್ಯ ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು’’ ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

‘‘ನಿರಪರಾಧಿ ಅಧಿಕಾರಿಗಳು ಒತ್ತಡಕ್ಕೆ, ಭ್ರಷ್ಟಾಚಾರದ ಆರೋಪಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದರೆ ಭ್ರಷ್ಟಾಚಾರಕ್ಕೆ ತಡೆಯೊಡ್ಡ ಲೆಂದೇ ಇರುವ ಲೋಕಾಯುಕ್ತ ಹಾಗೂ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಏನು ಮಾಡುತ್ತಿ ದ್ದಾರೆ’’ಎಂದು ಪ್ರಶ್ನಿಸಿದರು. ‘‘ತಪ್ಪು ಮಾಡಿದ್ದರೆ ಯಾರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿ. ಅದೇ ರೀತಿ ಅಮಾಯಕರಿಗೆ ರಕ್ಷಣೆ ನೀಡಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕು’’ ಎಂದು ಆಗ್ರಹಿಸಿದರು.

‘‘ಜಿಲ್ಲೆಯಲ್ಲಿಯೂ ಅಧಿಕಾರಿ ಗಳನ್ನು ಹೆಸರಿಸಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವಿದ್ದು, ಪ್ರಮಾಣಿಕ ಅಧಿಕಾರಿ ಗಳು ಮುಲಾಜಿಲ್ಲದೆ ದೂರು ನೀಡಲಿ’’ ಎಂದರು.

‘‘ಹೇಮಾವತಿ ಜಲಾಶಯದಿಂದ ನಿತ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಿ, ಈ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಬೇಕು, ಹೇಮಾವತಿ ಮೇಲ್ದಂಡೆ ನಾಲೆ ಹಾಗೂ ಶ್ರೀರಾಮದೇವರ ನಾಲೆ ಮೂಲಕ ಕೆರೆ, ಕಟ್ಟೆಗೆ ನೀರು ಹರಿಸಬೇಕು’’ ಎಂದು ಒತ್ತಾಯಿಸಿದರು. ಶಾಸಕ ಎಚ್.ಎಸ್.ಪ್ರಕಾಶ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ