ಆ್ಯಪ್ನಗರ

ಕರ್ತವ್ಯಲೋಪ: ಮೂವರ ಅಮಾನತು

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂ ಪಾಷ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Vijaya Karnataka 21 Mar 2019, 5:00 am
ಅರಕಲಗೂಡು: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂ ಪಾಷ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Vijaya Karnataka Web dismissal three suspended
ಕರ್ತವ್ಯಲೋಪ: ಮೂವರ ಅಮಾನತು


ಕಾಲೇಜಿನ ಉಪನ್ಯಾಸಕ ಎಸ್‌.ವೈ.ದೀಪು, ಬನ್ನೂರು ಗ್ರಾಪಂ ಕಾರ್ಯದರ್ಶಿ ಸುನೀಲ್‌, ಆಲದಹಳ್ಳಿ ಗ್ರಾಪಂ ಕಾರ್ಯದರ್ಶಿ ಯೋಗೇಶ್‌ ಹಾಗೂ ಪೇದೆ ಕೃಷ್ಣ, ಗೃಹರಕ್ಷ ಕ ಸ್ವಾಮಿಗೌಡ ಎಂಬುವರನ್ನು ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಿಪ್ಪಲಿ ಚೆಕ್‌ಪೋಸ್ಟ್‌ಗೆ ನಿಯೋಜಿಸಲಾಗಿತ್ತು.

ಮಾ.19ರಂದು ರಾತ್ರಿ 11.25ರ ವೇಳೆ ಜಿಲ್ಲಾ ಚುನಾವಣಾಧಿಕಾರಿ, ಅರಕಲಗೂಡು ತಹಸೀಲ್ದಾರ್‌ ಸಂಬಂಧಿಸಿದ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ವೇಳೆ ಈ ಐದು ಮಂದಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಚುನಾವಣಾ ಕರ್ತವ್ಯಲೋಪವೆಂದು ಪರಿಗಣಿಸಿ ಈ ಅಮಾನತುಗೊಳಿಸಿದ್ದಾರೆ.

ಪೇದೆ ಕೃಷ್ಣ ಮತ್ತು ಗೃಹರಕ್ಷ ಕ ಸ್ವಾಮಿಗೌಡ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಲಾಖೆ ಮೇಲಧಿಕಾರಿಗೆ ಮಾಹಿತಿ ರವಾನಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ