ಆ್ಯಪ್ನಗರ

ಹನಿ ನೀರಾವರಿ ಪ್ರೋತ್ಸಾಹಿಸಿ

ಹನಿ ನೀರಾವರಿ ತಂತ್ರಜ್ಞಾನಗಳ ಬಳಕೆ ಬಗ್ಗೆ ಹೆಚ್ಚಿನ ಇಲಾಖೆಗಳು ಪ್ರೋತ್ಸಾಹ ನೀಡಬೇಕು ಎಂದು ಹೊಸದಿಲ್ಲಿಯ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಹಾಯಕ ಕಾರ್ಯದರ್ಶಿ ಪ್ರಿಯಾಂಕ ಜಿ. ಸೂಚನೆ ನೀಡಿದರು.

Vijaya Karnataka 15 Jul 2019, 8:55 pm
ಹಾಸನ: ಹನಿ ನೀರಾವರಿ ತಂತ್ರಜ್ಞಾನಗಳ ಬಳಕೆ ಬಗ್ಗೆ ಹೆಚ್ಚಿನ ಇಲಾಖೆಗಳು ಪ್ರೋತ್ಸಾಹ ನೀಡಬೇಕು ಎಂದು ಹೊಸದಿಲ್ಲಿಯ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಹಾಯಕ ಕಾರ್ಯದರ್ಶಿ ಪ್ರಿಯಾಂಕ ಜಿ. ಸೂಚನೆ ನೀಡಿದರು.
Vijaya Karnataka Web HSN-HSN15N6


ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ಜಲಶಕ್ತಿ ಅಭಿಯಾನ ಚುರುಕುಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘‘ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳಲ್ಲಿ ನೀರಿನ ಮೇಲಿನ ಅತಿಯಾದ ಅವಲಂಬಿಕೆ ಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹನಿ ನೀರಾವರಿ ಮತ್ತು ಸಣ್ಣ ನೀರಾವರಿ ಯೋಜನೆಗಳ ಅನುಷ್ಠಾನ ಹೆಚ್ಚಿಸಬೇಕು. ಇದಕ್ಕಾಗಿ ನೀಡಲಾ ಗುತ್ತಿರುವ ಸಬ್ಸಿಡಿ ಸೌಲಭ್ಯಗಳು ವಿಸ್ತರಣೆಯಾಗಬೇಕು. ಅಲ್ಲದೆ ಇವುಗಳ ಬಳಕೆಯ ಲಾಭದ ಬಗ್ಗೆ ವ್ಯಾಪಕ ಜಾಗತಿ ಮೂಡಿಸಬೇಕು,’’ ಎಂದು ಹೇಳಿದರು.

ರೈತರಿಗೆ ಮಾಹಿತಿ ನೀಡಿ: ‘‘ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಹಲವು ಕಡೆಗಳಲ್ಲಿ ರೈತರಿಗೆ ಹನಿ ನೀರಾವರಿಯ ಅನುಕೂಲಗಳ ಬಗ್ಗೆ ಮಾಹಿತಿ ಪ್ರಾತ್ಯಕ್ಷಿಕೆ ನೀಡುವ ಕೆಲಸವಾಗಬೇಕು. ಸಂಬಧಂಪಟ್ಟ ಇಲಾಖೆಗಳು ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಸಂರಕ್ಷಣೆ, ಮಿತಬಳಕೆ ಹಾಗೂ ಸಂಸ್ಕರಣೆಯ ಬಗ್ಗೆ ಕಿರು ಪುಸ್ತಕಗಳನ್ನು ಮಾಡುವುದರ ಮೂಲಕ ರೈತರಲ್ಲಿ ಅರಿವು ಮೂಡಿಸಬಹುದು. ಪ್ರತಿ ಮನೆ ಮನೆಗೂ ಈ ಮಾಹಿತಿ ತಲುಪಬೇಕು. ಕಷಿ ಕೇಂದ್ರಗಳಲ್ಲಿ ಈ ಬಗ್ಗೆ ಹೆಚ್ಚು ವರದಿಯಾಗಬೇಕು,’’ ಎಂದು ಹೇಳಿದರು.

‘‘ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿ ಅಧಿಕಾರಿಗಳ ಸಹಾಯ ಪಡೆಯುವವರ ಮೂಲಕ ಕೆರೆಗಳನ್ನು ದತ್ತು ತೆಗೆದುಕೊಂಡು ಅಭಿವದ್ಧಿ ಮಾಡಬಹುದಾಗಿದೆ. ಅಲ್ಲಿನ ಜನರಿಗೆ ಹನಿ-ಹನಿ ನೀರಿನ ಮಹತ್ವದ ಬಗ್ಗೆ ತಿಳಿಸುವುದರೊಂದಿಗೆ ಜಲ ಸಂರಕ್ಷಣೆಗೆ ಸಾರ್ವಜನಿಕರು ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಹಾಗೂ ಜಿಪಂ ಪ್ರಭಾರ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಎಲ್.ವೈಶಾಲಿ ಮಾತನಾಡಿ, ‘‘ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು ,ಸಾರ್ವಜನಿಕರು ಹಾಗೂ ರೈತರು ಹಲವು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ನೀರಿನ ಸದ್ಬಳಕೆಯ ಬಗ್ಗೆ ಅರಿವು ಕಾರ್ಯವನ್ನು ತೀವ್ರಗೊಳಿಸಬೇಕು. ಇದರಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖ,’’ ಎಂದು ತಿಳಿಸಿದರು.

‘‘ಮಳೆನೀರು ಕೊಯ್ಲು ಹಾಗೂ ಚೆಕ್‌ಡ್ಯಾಂಗಳ ಬಗ್ಗೆ ಸೂಕ್ಷ್ಮವಾಗಿ ಗಮನಹರಿಸಬೇಕಿದೆ. ಈಗಾಗಲೇ ಜಲ ಸಂರಕ್ಷಣೆಗಾಗಿ ಹತ್ತಾರು ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಕೆರೆ ಕಟ್ಟೆಗಳ ಅಭಿವದ್ಧಿ ಹೊಸ ಚೆಕ್ ಡ್ಯಾಂ ನಿರ್ಮಾಣ ನಡೆಯುತ್ತಿದೆ,’’ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ಕ ನಿರ್ದೇಶಕರಾದ ಮಧುಸೂದನ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಮಾತನಾಡಿ, ಹನಿ ನೀರಾವರಿ, ಸಣ್ಣ ನೀರಾವರಿಯ ಅನುಕೂಲಗಳು ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಯೋಜನೆಗಳ ಬಗ್ಗೆ ವಿವರಿಸಿದರು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತ ಆನಂದ್ ಅವರು ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕುಗಳಲ್ಲಿ ನಿರ್ಮಾಣಗೊಂಡಿರುವ ಬಹುಕಮಾನು ಅಣೆಕಟ್ಟೆಗಳು, ವೇದಾವತಿ ನದಿ ಪುನಶ್ಚೇತನ ಯೋಜನೆ, ನಿಷ್ಕ್ರೀಯ ಕೊಳವೆ ಬಾವಿಗೆ ಜಲ ಮರುಪೂರಣ ಕ್ರಮಗಳ ಬಗ್ಗೆ ವಿವರಿಸಿದರು.

ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಕಷ್ಣಮೂರ್ತಿ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮಳೆ ನೀರು ಕೊಯ್ಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರ ಮನೆಗಳಿಗೆ ಈ ಯೋಜನೆ ಅನುಷ್ಠಾನ ಕಡ್ಡಾಯವಾಗಲಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸುಧಾ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ನೀರಿನ ಪರಿಸ್ಥಿತಿಯನ್ನು ವಿವರಿಸಿದರು. ನಾನಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕೆರೆ ಪುನಶ್ಚೇತನಕ್ಕೆ ಸಲಹೆ
ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕಿನಲ್ಲಿ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಮುಂದಾಗಬೇಕು. ಜತೆಗೆ ಚೆಕ್ ಡ್ಯಾಂಗಳ ನಿರ್ಮಾಣದ ಮೂಲಕ ಅಭಿವದ್ಧಿ ಕಾರ್ಯಗಳಲ್ಲಿ ಸರಕಾರದ ಜೊತೆ ಸಂಘ ಸಂಸ್ಥೆಗಳು ಸಾರ್ವಜನಿಕರು ಕೈಜೋಡಿಸಬೇಕು,’’ ಎಂದು ಪ್ರಿಯಾಂಕ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ