ಆ್ಯಪ್ನಗರ

ಪ್ರಜ್ವಲ್‌ ನಾಮಪತ್ರದಲ್ಲಿ ಸುಳ್ಳು ಮಾಹಿತಿ: ತನಿಖೆಗೆ ಆಯೋಗ ಸೂಚನೆ

ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ವಿವರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಪ್ಪು ಮಾಹಿತಿ ನೀಡಿದ್ದಾರೆಂಬ ಆರೋಪ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಚುನಾವಣಾ ಆಯೋಗ ನೋಟೀಸ್‌ ಜಾರಿ ಮಾಡಿದೆ.

Vijaya Karnataka 14 Apr 2019, 8:23 pm
ಹಾಸನ: ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ವಿವರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಪ್ಪು ಮಾಹಿತಿ ನೀಡಿದ್ದಾರೆಂಬ ಆರೋಪ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಚುನಾವಣಾ ಆಯೋಗ ನೋಟೀಸ್‌ ಜಾರಿ ಮಾಡಿದೆ.
Vijaya Karnataka Web false information on prajwals nomination commission notice to probe
ಪ್ರಜ್ವಲ್‌ ನಾಮಪತ್ರದಲ್ಲಿ ಸುಳ್ಳು ಮಾಹಿತಿ: ತನಿಖೆಗೆ ಆಯೋಗ ಸೂಚನೆ


ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಾವು ಖಾಸಗಿ ಕಂಪನಿಗಳಲ್ಲಿ ಹೊಂದಿರುವ ಶೇರು ಮಾಹಿತಿ ನೀಡದೆ ವಂಚಿಸಿದ್ದಾರೆ, ತಪ್ಪು ಮಾಹಿತಿ ನೀಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದರು.

ಬಿಜೆಪಿ ಅಭ್ಯರ್ಥಿ ದೂರಿನ ಬೆನ್ನಲ್ಲೇ ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅಬ್ರಹಾಂ ದೂರು ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿಗೆ ನೋಟೀಸ್‌ ಜಾರಿ ಮಾಡಿದ್ದು, ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ