ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 3 Jul 2019, 5:00 am
ಅರಸೀಕೆರೆ: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web farmer commits suicide
ಸಾಲಬಾಧೆ: ರೈತ ಆತ್ಮಹತ್ಯೆ


ತಾಲೂಕಿನ ಕರಡೀಹಳ್ಳಿ ಗ್ರಾಮದ ರೈತ ಕೆ.ಸಿ.ಗಂಗಾಧರಪ್ಪ (74) ಮೃತರು. ಇವರು ತಮ್ಮ ಜಮೀನಿನಲ್ಲಿ ಹಲಸಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

''ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸಲು ಚಿನ್ನದ ಮೇಲೆ ಬ್ಯಾಂಕ್‌ನಲ್ಲಿ 70 ಸಾವಿರ ರೂ. ಸಾಲ ಮಾಡಿದ್ದರು. ವರ್ಷದ ಹಿಂದೆ ಬೋರ್‌ವೆಲ್‌ ಕೊರೆಸಿದ್ದು ನೀರು ನಿಂತು ಹೋಗಿದ್ದರಿಂದ ತೆಂಗಿನ ತೋಟ ಒಣಗಿದೆ. ಇದರಿಂದ ಜಮೀನಿನ ಅಭಿವೃದ್ಧಿಗಾಗಿ 2 ಲಕ್ಷ ಕೈ ಸಾಲ ಮಾಡಿಕೊಂಡಿದ್ದು, ಸರಿಯಾದ ಮಳೆ ಇಲ್ಲದೆ ಬೆಳೆಯೂ ಬಾರದೆ ಸಾಲ ತೀರಿಸಲಾಗಿರಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,'' ಎಂದು ಪೊಲೀಸರಿಗೆ ಪತ್ನಿ ಗಂಗಮ್ಮ ತಿಳಿಸಿದ್ದಾರೆ. ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಬಾಣಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ