ಆ್ಯಪ್ನಗರ

ಠಾಣೆಗೆ ನುಗ್ಗಿ ಆರೋಪಿ ಕರೆದೊಯ್ದ ಆರೋಪ: ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ದೂರು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka Web 30 Aug 2018, 2:13 pm
ಹಾಸನ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web fir fir


ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಮಧ್ಯ ರಾತ್ರಿ (ಬುಧವಾರ) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ 8ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ವೇಣು ಹಾಗೂ ಬೆಂಬಲಿಗರು ಮದ್ಯ ಹಂಚಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆತಂದು ದೂರು ದಾಖಲಿಸಿದ್ದರು.

ತಡರಾತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ತಮ್ಮವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ, ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಹಂಚಿಕೆ ಮಾಡುವ ಮೂಲಕ ಆಮಿಷ ಒಡ್ಡುವುದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಪ್ರಕರಣ ದಾಖಲಿಸಲಾಗಿದೆ ಎಂದರೂ ಕೇಳದ ಶಾಸಕರು ಹಾಗೂ ಬೆಂಬಲಿಗರು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಬಂಧಿತರನ್ನು ಕಾನೂನು ಬಾಹಿರವಾಗಿ ಪೊಲೀಸ್ ಠಾಣೆಯಿಂದ ಹೊರ ಕರೆತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 143, 353, 225ರ ಅಡಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ