ಆ್ಯಪ್ನಗರ

ಬ್ರೇಕ್‌ ವಿಫಲಗೊಂಡು ಪ್ರಪಾತಕ್ಕೆ ಬಿದ್ದ ಕಾರು

ಬ್ರೇಕ್‌ ವಿಫಲವಾದ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಬಿದ್ದರೂ ಒಳಗಿದ್ದ ಎಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವ ಘಟನೆ ಹೆತ್ತೂರು ಸುೕಪದ ಹಾಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

Vijaya Karnataka 13 Apr 2018, 5:20 am

ವನಗೂರು: ಬ್ರೇಕ್‌ ವಿಫಲವಾದ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಬಿದ್ದರೂ ಒಳಗಿದ್ದ ಎಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವ ಘಟನೆ ಹೆತ್ತೂರು ಸುೕಪದ ಹಾಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೆತ್ತೂರು ಹೋಬಳಿ ಹಾಡ್ಲಹಳ್ಳಿ ಗ್ರಾಮದ ಸುರೇಂದ್ರ ಎಂಬುವರು ಹೆತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ಮದುವೆ ಕಾರ‍್ಯಕ್ರಮ ಮುಗಿಸಿಕೊಂಡು ಗ್ರಾಮಕ್ಕೆ ವಾಪಸಾಗುತ್ತಿದ್ದರು. ಗ್ರಾಮದ ಸಮೀಪ ಕಾರಿನ ಬ್ರೇಕ್‌ ವಿಫಲವಾಗಿ ಚಾಲಕನ ಹತೋಟಿ ತಪ್ಪಿ ಸುಮಾರು 15 ಅಡಿ ಪ್ರಪಾತಕ್ಕೆ ಬಿದ್ದಿದೆ. ವಾಹನದಲ್ಲಿ 6 ಮಂದಿ ಇದ್ದರೂ ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯವಿಲ್ಲದೆ ಎಲ್ಲರೂ ಪಾರಾಗಿದ್ದರೆ. ಮೂವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ