ಆ್ಯಪ್ನಗರ

ಆಲೂರು: ಹಾಸನದಲ್ಲಿ ಈ ಬಾರಿ ಪಕ್ಷಾತೀತ ಚುನಾವಣೆ

ಆಲೂರು: ಈ ಬಾರಿ ಹಾಸನ ಲೋಕಸಭಾ ಚುನಾವಣೆ ಪಕ್ಷಾತೀತವಾಗಿ ನಡೆಯುತ್ತಿದ್ದು, ಜೆಡಿಎಸ್‌ ಕಾರ್ಯಕರ್ತರು ವಂಶಾಡಳಿತದ ವಿರುದ್ಧ ಬಿಜೆಪಿಗೆ ಮತ ನೀಡಿದರೆ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ದಬ್ಬಾಳಿಕೆ ವಿರುದ್ಧ ಮತ ನೀಡಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

Vijaya Karnataka 8 Apr 2019, 5:00 am
ಆಲೂರು: ಈ ಬಾರಿ ಹಾಸನ ಲೋಕಸಭಾ ಚುನಾವಣೆ ಪಕ್ಷಾತೀತವಾಗಿ ನಡೆಯುತ್ತಿದ್ದು, ಜೆಡಿಎಸ್‌ ಕಾರ್ಯಕರ್ತರು ವಂಶಾಡಳಿತದ ವಿರುದ್ಧ ಬಿಜೆಪಿಗೆ ಮತ ನೀಡಿದರೆ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ದಬ್ಬಾಳಿಕೆ ವಿರುದ್ಧ ಮತ ನೀಡಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.
Vijaya Karnataka Web hassan aaluru bjp c t ravi campigan
ಆಲೂರು: ಹಾಸನದಲ್ಲಿ ಈ ಬಾರಿ ಪಕ್ಷಾತೀತ ಚುನಾವಣೆ


ಕಸಬಾ ಕದಾಳು ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕತೆ ಹಾಗೂ ಭ್ರಷ್ಟಾಚಾರದ ನಡುವೆ ಈ ಚುನಾವಣೆ ನಡೆಯುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ ಐದು ವರ್ಷದ ಬಿಜೆಪಿ ಸರಕಾರ ಭ್ರಷ್ಟಾಚಾರವಿಲ್ಲದ ಕಳಂಕ ರಹಿತ ಆಡಳಿತ ನಡೆಸಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ 1999 ರ ವಿಧಾನಸಭಾ ಚುನಾವಣೆಯಲ್ಲಿ 4 ಬಿಜೆಪಿ ಶಾಸಕರು ಆರಿಸಿ ಬಂದಿದ್ದರು. ಈ ಬಾರಿ ಚುನಾವಣೆಯಲ್ಲಿ ಕೂಡ ಅದೇ ಪರಿಸ್ಥಿತಿ ನಿರ್ಮಾಣವಾಗಿದ್ದು ಬಿಜೆಪಿ ಅಭ್ಯರ್ಥಿ ಎ.ಮಂಜು ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಮಕ್ಕಳನ್ನು ರಾಜಕೀಯವಾಗಿ ಬೆಳೆಸುವ ಉದ್ದೇಶದಿಂದ ಕಾಂಗ್ರೆಸ್‌ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪಕ್ಷ ಕ್ಕಾಗಿ ದುಡಿದ ಜೆಡಿಎಸ್‌ ನಾಯಕ ಹಾಗೂ ಕಾರ‍್ಯಕರ್ತರನ್ನು ಸಂಪೂರ್ಣವಾಗಿ ಮುಗಿಸಿದ್ದಾರೆ. ಹಾಸನ, ಮೈಸೂರು, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸೇರಿದಂತೆ 22ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಪಡೆಯಲಿದೆ ಎಂದರು.

ವಿಧಾನಪರಿಷತ್‌ ಸದಸ್ಯ ಪ್ರಾಣೇಶ್‌ ಮಾತನಾಡಿ, ಹಲವು ವರ್ಷಗಳಿಂದಲೂ ಪಕ್ಷ ಕ್ಕೆ ದುಡಿದ ಹಿರಿಯ ನಾಯಕರುಯ ಜೆಡಿಎಸ್‌ ಪಕ್ಷ ದಲ್ಲಿದ್ದರೂ ಕೂಡ ಕುಟುಂಬ ರಾಜಕಾರಣಕ್ಕೆ ಜೋತು ಬಿದ್ದು ದೇವೇಗೌಡರು ಸೇರಿದಂತೆ ಇಬ್ಬರು ಮೊಮ್ಮಕ್ಕಳು ಸರ್ಧೆಗೆ ಇಳಿಸಿದ್ದಾರೆ. ಇದೇ ಮೊದಲು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಂದೇ ಕುಟುಂಬದ ವ್ಯಕ್ತಿಗಳು ಸ್ಪರ್ಧೆ ಮಾಡಿದ್ದಾರೆ. ಇಂತಹ ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು ಎಂದರು.

ಬಿಜೆಪಿ ಮುಖಂಡರಾದ ರೇಣುಕುಮಾರ್‌, ಜಿಪಂ ಮಾಜಿ ಸದಸ್ಯ ಅಮೀತ್‌ಶೆಟ್ಟಿ, ತಾಲೂಕು ಅಧ್ಯಕ್ಷ ಕದಾಳು ಲೋಕೇಶ್‌, ಎಚ್‌.ಬಿ.ಧರ್ಮರಾಜ್‌, ಹೇಮಂತ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ