ಆ್ಯಪ್ನಗರ

ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ *ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿಆರ್‌...

Vijaya Karnataka 30 Sep 2018, 5:00 am
ಹಾಸನ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾದಿಗ ದಂಡೋರ ಸಮಿತಿಯಿಂದ ಅ.2ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್‌. ವಿಜಯ್‌ ಕುಮಾರ್‌ ತಿಳಿಸಿದರು.
Vijaya Karnataka Web hassan aj sadashiva commission report impliment madiga dandora commitee demand october 2nd protest
ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ


ಎಲ್ಲ ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ನ ಬಂಡವಾಳವನ್ನಾಗಿ ಮಾಡಿಕೊಂಡು ಪರಿಶಿಷ್ಟರಲ್ಲಿಯೇ ಅತೀ ಹೆಚ್ಚು ಜನ ಸಂಖ್ಯೆಯನ್ನು ಹೊಂದಿರುವ ಮಾದಿಗ ಮತ್ತು ಅದರ ಉಪಜಾತಿಗಳನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರಕಾರಗಳು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ವಿಳಂಬ ನೀತಿಯನ್ನು ಅನುಸರಿಸಿಕೊಂಡು ಬಂದಿವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ವರದಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದರು. ಆದರೆ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದ್ದು ಕೂಡಲೇ ವರದಿಯನ್ನು ವಿಶೇಷ ಅಧಿವೇಶನ ಕರೆದು ಕ್ಯಾಬಿನೆಟ್‌ನಲ್ಲಿ ಮಂಡಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು. ಹಾಗಾಗಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯಿಂದಲೂ ಕಾರ್ಯಕರ್ತರು ತೆರಳಲಿದ್ದಾರೆ ಎಂದು ಹೇಳಿದರು.

ಮಾದಿ ದಂಡೋರ ಸಮಿತಿಯ ಮುಖಂಡರಾದ ರವಿಕುಮಾರ್‌, ಚಂದ್ರು, ರವೀಸ್‌ ಬಸವಪುರ, ಶೇಖರಯ್ಯ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ