ಆ್ಯಪ್ನಗರ

ನಾಳೆ ಆಳ್ವಾಸ್‌ ಸಾಂಸ್ಕೃತಿಕ ವೈಭವ

ಹಾಸನ: ಆಳ್ವಾಸ್‌ ನುಡಿಸಿರಿ ವಿರಾಸತ್‌ ಜಿಲ್ಲಾ ಘಟಕ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದಲ್ಲಿ ಫೆ.27ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 'ಆಳ್ವಾಸ್‌ ಸಾಂಸ್ಕೃತಿಕ ವೈಭವ' ಕಾರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಆಯುರ್ವೇದ ಕಾಲೇಜು ಪ್ರಾಂಶುಪಾಲ ಪ್ರಸನ್ನ ಎನ್‌.ರಾವ್‌ ಹೇಳಿದರು.

Vijaya Karnataka 26 Feb 2019, 5:00 am
ಹಾಸನ: ಆಳ್ವಾಸ್‌ ನುಡಿಸಿರಿ ವಿರಾಸತ್‌ ಜಿಲ್ಲಾ ಘಟಕ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದಲ್ಲಿ ಫೆ.27ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 'ಆಳ್ವಾಸ್‌ ಸಾಂಸ್ಕೃತಿಕ ವೈಭವ' ಕಾರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಆಯುರ್ವೇದ ಕಾಲೇಜು ಪ್ರಾಂಶುಪಾಲ ಪ್ರಸನ್ನ ಎನ್‌.ರಾವ್‌ ಹೇಳಿದರು.
Vijaya Karnataka Web hassan alavas cultural event 27th
ನಾಳೆ ಆಳ್ವಾಸ್‌ ಸಾಂಸ್ಕೃತಿಕ ವೈಭವ


ಆಧುನಿಕ ಯುಗದಲ್ಲಿ ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಸಂಸ್ಕೃತಿ ಪರಿಚಯಿಸುವ ಉದ್ದೇಶದಿಂದ ಆಳ್ವಾಸ್‌ ಶಿಕ್ಷ ಣ ಸಂಸ್ಥೆಯಲ್ಲಿ 6 ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 325 ಪ್ರತಿಭಾವಂತ ವಿದ್ಯಾರ್ಥಿಗಳಿಂದ ಕಾರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೂರು ವಿದ್ಯಾರ್ಥಿಗಳು ಜಿಲ್ಲೆಯವರೇ ಆಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.

ಸಂಜೆ 5.45ಕ್ಕೆ ಕಾರ‍್ಯಕ್ರಮ ಪ್ರಾರಂಭವಾಗಲಿದ್ದು ಕೇರಳದ ಮೋಹಿನಿಯಾಟ್ಟಂ-ಅಷ್ಟಲಕ್ಷ್ಮಿ, ಬುಡಗುತಿಟ್ಟು ಯಕ್ಷ ಗಾನ- ದಾಸ ದೀಪಾಂಜಲಿ, ಆಂಧ್ರಪ್ರದೇಶದ ಜನಪದ ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ ಡ್ಯಾನ್ಸ್‌ , ಶಾಸ್ತ್ರೀಯ ನ್ಯತ್ಯ- ನವದುರ್ಗೆ, ಶ್ರೀಲಂಕಾದ ಕ್ಯಾಂಡಿಯನ್‌ ನ್ಯತ್ಯ, ಮಲ್ಲಕಂಬ ಮತ್ತು ರೋಪ್‌ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿದೋಲ್‌ ಚಲಮ್‌ ಹಾಗೂ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿರುವ 'ಅಭಿವೃದ್ಧಿ ಎಂಬ 15 ನಿಮಿಷಗಳ ಕಿರು ನಾಟಕ ಪ್ರದರ್ಶನವಿದೆ ಎಂದರು.

ರವಿನಾಕಲಗೂಡು, ನಾಯಕರಹಳ್ಳಿ ಮಂಜೇಗೌಡ,ಜಾವ್‌ಗಲ್‌ ಪ್ರಸನ್ನ ಮತ್ತಿತರರು ಹಾಜರಿದ್ದರು.
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ