ಆಲೂರು: ಪಟ್ಟಣದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಅಂಗಡಿಯನ್ನು ಕೂಡಲೇ ತೆರವು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಸಾರ್ವಜನಿಕ ಕುಂದು ಕೊರತೆ, ದೂರು ಸ್ವೀಕಾರ ಸಭೆಯಲ್ಲಿ ರೈತ ಸಂಘದ ಮುಖಂಡ ಕಣಗಾಲು ಮೂರ್ತಿ, ಪಿಎಲ್ಡಿಬಿ ನಿರ್ದೇಶಕ ಎ.ಎಚ್.ರಮೇಶ್, ಪಪಂ ಸದಸ್ಯ ಎಚ್.ವಿ.ಶಿವರಾಮೇಗೌಡ ಮಾತನಾಡಿ, ಪಟ್ಟಣದಲ್ಲಿ ಹಲವು ವರ್ಷಗಳಿಂದ ನಿವಾಸಿಗಳು ವಾಸ ಮಾಡುತ್ತಿರುವ ಮತ್ತು ಉಪ ನೋಂದಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯವಾಗಿ ಪರಿಸರ ನೈರ್ಮಲ್ಯ ಹಾಳಾಗುತ್ತಿದೆ. ಸಾರ್ವಜನಿಕರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಅಂಗಡಿಯನ್ನು ಕೂಡಲೇ ತೆರವುಗೊಳಿಸಬೇಕೆಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಮೀನಿಗೆ ಸಂಬಂಧಿಸಿ, ದಾರಿ ಬಿಡಿಸಿಕೊಡಬೇಕು, ಪಹಣಿಯಲ್ಲಿ ವ್ಯತ್ಯಾಸ ಸರಿಪಡಿಸಬೇಕು. ಇನ್ನಿತರೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅರ್ಜಿ ದಾಖಲಿಸಿದ್ದಾರೆ. ಅರ್ಜಿಗಳ ವಿಲೇವಾರಿಗೆ ಕೂಡಲೇ ಸಂಬಂಧಿಸಿದ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ಮಳೆ ಇದ್ದರೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸವಾಗಿದೆ ಎಂದರು.
ಸುಮಾರು 200 ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗಳು ಸಭೆಗೆ ಆಗಮಿಸುವ ಮುನ್ನವೇ ದಾಖಲಿಸಿದ್ದರು. ಮಿನಿವಿಧಾನಸೌಧ ಆವರಣದಲ್ಲಿ ಸಾರ್ವಜನಿಕರು ಅರ್ಜಿಗಳನ್ನು ದಾಖಲಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ತಾಲೂಕಿನ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎತ್ತಿನಹೊಳೆ ನೀರನ್ನು ವಾಟೆಹೊಳೆ ಜಲಾಶಯಕ್ಕೆ ಹರಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾವಕಾಶ, ಸಾರಿಗೆ ಬಸ್ ಡಿಪೋ, ಅಗ್ನಿಶಾಮಕ ಠಾಣೆ, ರೈಲು ನಿಲುಗಡೆ, ವಾರದ ಸಂತೆ ಸ್ಥಳಾಂತರ, ರುದ್ರಭೂಮಿ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಯಗಚಿ ಹೊಳೆಗೆ ಬೇಲೂರು ಪಟ್ಟಣದ ಒಳಚರಂಡಿ ನೀರನ್ನು ಹರಿ ಬಿಡುತ್ತಿರುವುದರಿಂದ, ಮಲಿನಗೊಳ್ಳುತ್ತಿರುವ ಯಗಚಿ ನದಿ ನೀರನ್ನು ಸಾರ್ವಜನಿಕರು ಉಪಯೋಗಿಸುತ್ತಿರುವುದರಿಂದ ರೋಗಕ್ಕೆ ತುತ್ತಾಗುತ್ತಿರುವುದು, ಪೊಲೀಸ್ ಹಳೆ ನಿವೇಶನ ತೆರವುಗೊಳಿಸಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ತೆರೆಯಬೇಕು ಎಂದು ಹಲವು ಮಂದಿ ದೂರು ಸಲ್ಲಿಸಿದ್ದರು.
ಮಗ್ಗೆ ಗ್ರಾಮದಲ್ಲಿ ಪೊಲೀಸ್ ಠಾಣೆ ತೆರೆಯಬೇಕು, ಆಲೂರಿನಲ್ಲಿ ಸಂಚಾರಿ ಪೊಲೀಸ್ ಠಾಣೆ ತೆರೆಯಬೆಕು. ಪಾಳ್ಯ ಹೋಬಳಿಗೆ ವಿದ್ಯುತ್ ಉಪಕರಣ ಕೇಂದ್ರ, ಪಟ್ಟಣ ಪಂಚಾಯಿಗೆ ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಬೇಕು, ತಾಲೂಕು ಆಸ್ಪತ್ರೆ ಕಟ್ಟಡದೊಳಗಿರುವ ಶವಾಗಾರ ಸ್ಥಳಾಂತರ, ಭೈರಾಪುರ ಸರ್ವೇ ನಂ. 36 ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂಬ ಸಾರ್ವಜನಿಕ ಅರ್ಜಿಗಳು ಜಿಲ್ಲಾಧಿಕಾರಿಗಳಿಗೆ ಸಲ್ಲಿಕೆಯಾಗಿದ್ದವು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ವೆಂಕಟರಮಣ ರೆಡ್ಡಿ, ತಹಸೀಲ್ದಾರ್ ಎನ್. ಕೆ. ಶಾರದಾಂಬ, ಡಿವೈಎಸ್ಪಿ ಜಗದೀಶ್, ಪಿಎಸ್ಐ ವಿನಯ್, ತಾಪಂ ಇಒ ಚಂದ್ರಶೇಖರ್, ಭೂ ದಾಖಲೆ ಇಲಾಖೆ ನಿರ್ದೇಶಕರು, ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ. ಎಸ್. ಮಂಜೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಟರಾಜ್ ಸೇರಿದಂತೆ ಹಲವು ಸಂಘಸಂಸ್ಥೆಗಳ ಪ್ರತಿನಿದಿಗಳು ಭಾಗವಹಿಸಿ ತಾಲೂಕಿನ ಮೂಲಭೂತ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಸಂಘ ಸಂಸ್ಥೆಗಳ ವತಿಯಿಂದ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಸಾರ್ವಜನಿಕ ಕುಂದು ಕೊರತೆ, ದೂರು ಸ್ವೀಕಾರ ಸಭೆಯಲ್ಲಿ ರೈತ ಸಂಘದ ಮುಖಂಡ ಕಣಗಾಲು ಮೂರ್ತಿ, ಪಿಎಲ್ಡಿಬಿ ನಿರ್ದೇಶಕ ಎ.ಎಚ್.ರಮೇಶ್, ಪಪಂ ಸದಸ್ಯ ಎಚ್.ವಿ.ಶಿವರಾಮೇಗೌಡ ಮಾತನಾಡಿ, ಪಟ್ಟಣದಲ್ಲಿ ಹಲವು ವರ್ಷಗಳಿಂದ ನಿವಾಸಿಗಳು ವಾಸ ಮಾಡುತ್ತಿರುವ ಮತ್ತು ಉಪ ನೋಂದಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯವಾಗಿ ಪರಿಸರ ನೈರ್ಮಲ್ಯ ಹಾಳಾಗುತ್ತಿದೆ. ಸಾರ್ವಜನಿಕರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಅಂಗಡಿಯನ್ನು ಕೂಡಲೇ ತೆರವುಗೊಳಿಸಬೇಕೆಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಮೀನಿಗೆ ಸಂಬಂಧಿಸಿ, ದಾರಿ ಬಿಡಿಸಿಕೊಡಬೇಕು, ಪಹಣಿಯಲ್ಲಿ ವ್ಯತ್ಯಾಸ ಸರಿಪಡಿಸಬೇಕು. ಇನ್ನಿತರೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅರ್ಜಿ ದಾಖಲಿಸಿದ್ದಾರೆ. ಅರ್ಜಿಗಳ ವಿಲೇವಾರಿಗೆ ಕೂಡಲೇ ಸಂಬಂಧಿಸಿದ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ಮಳೆ ಇದ್ದರೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸವಾಗಿದೆ ಎಂದರು.
ಸುಮಾರು 200 ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗಳು ಸಭೆಗೆ ಆಗಮಿಸುವ ಮುನ್ನವೇ ದಾಖಲಿಸಿದ್ದರು. ಮಿನಿವಿಧಾನಸೌಧ ಆವರಣದಲ್ಲಿ ಸಾರ್ವಜನಿಕರು ಅರ್ಜಿಗಳನ್ನು ದಾಖಲಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ತಾಲೂಕಿನ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎತ್ತಿನಹೊಳೆ ನೀರನ್ನು ವಾಟೆಹೊಳೆ ಜಲಾಶಯಕ್ಕೆ ಹರಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾವಕಾಶ, ಸಾರಿಗೆ ಬಸ್ ಡಿಪೋ, ಅಗ್ನಿಶಾಮಕ ಠಾಣೆ, ರೈಲು ನಿಲುಗಡೆ, ವಾರದ ಸಂತೆ ಸ್ಥಳಾಂತರ, ರುದ್ರಭೂಮಿ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಯಗಚಿ ಹೊಳೆಗೆ ಬೇಲೂರು ಪಟ್ಟಣದ ಒಳಚರಂಡಿ ನೀರನ್ನು ಹರಿ ಬಿಡುತ್ತಿರುವುದರಿಂದ, ಮಲಿನಗೊಳ್ಳುತ್ತಿರುವ ಯಗಚಿ ನದಿ ನೀರನ್ನು ಸಾರ್ವಜನಿಕರು ಉಪಯೋಗಿಸುತ್ತಿರುವುದರಿಂದ ರೋಗಕ್ಕೆ ತುತ್ತಾಗುತ್ತಿರುವುದು, ಪೊಲೀಸ್ ಹಳೆ ನಿವೇಶನ ತೆರವುಗೊಳಿಸಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ತೆರೆಯಬೇಕು ಎಂದು ಹಲವು ಮಂದಿ ದೂರು ಸಲ್ಲಿಸಿದ್ದರು.
ಮಗ್ಗೆ ಗ್ರಾಮದಲ್ಲಿ ಪೊಲೀಸ್ ಠಾಣೆ ತೆರೆಯಬೇಕು, ಆಲೂರಿನಲ್ಲಿ ಸಂಚಾರಿ ಪೊಲೀಸ್ ಠಾಣೆ ತೆರೆಯಬೆಕು. ಪಾಳ್ಯ ಹೋಬಳಿಗೆ ವಿದ್ಯುತ್ ಉಪಕರಣ ಕೇಂದ್ರ, ಪಟ್ಟಣ ಪಂಚಾಯಿಗೆ ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಬೇಕು, ತಾಲೂಕು ಆಸ್ಪತ್ರೆ ಕಟ್ಟಡದೊಳಗಿರುವ ಶವಾಗಾರ ಸ್ಥಳಾಂತರ, ಭೈರಾಪುರ ಸರ್ವೇ ನಂ. 36 ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂಬ ಸಾರ್ವಜನಿಕ ಅರ್ಜಿಗಳು ಜಿಲ್ಲಾಧಿಕಾರಿಗಳಿಗೆ ಸಲ್ಲಿಕೆಯಾಗಿದ್ದವು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ವೆಂಕಟರಮಣ ರೆಡ್ಡಿ, ತಹಸೀಲ್ದಾರ್ ಎನ್. ಕೆ. ಶಾರದಾಂಬ, ಡಿವೈಎಸ್ಪಿ ಜಗದೀಶ್, ಪಿಎಸ್ಐ ವಿನಯ್, ತಾಪಂ ಇಒ ಚಂದ್ರಶೇಖರ್, ಭೂ ದಾಖಲೆ ಇಲಾಖೆ ನಿರ್ದೇಶಕರು, ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ. ಎಸ್. ಮಂಜೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಟರಾಜ್ ಸೇರಿದಂತೆ ಹಲವು ಸಂಘಸಂಸ್ಥೆಗಳ ಪ್ರತಿನಿದಿಗಳು ಭಾಗವಹಿಸಿ ತಾಲೂಕಿನ ಮೂಲಭೂತ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಸಂಘ ಸಂಸ್ಥೆಗಳ ವತಿಯಿಂದ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಾಯಿತು.