ಆ್ಯಪ್ನಗರ

ಗ್ರಾಪಂ ಅಧಿಕಾರಿ ಮೇಲೆ ಹಲ್ಲೆ :ಆರೋಪಿಗಳ ಬಂಧನಕ್ಕೆ ಮನವಿ

ಹಾಸನ: ಗ್ರಾಮ ಪಂಚಾಯಿತಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖಾ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Vijaya Karnataka 3 Mar 2019, 5:00 am
ಹಾಸನ: ಗ್ರಾಮ ಪಂಚಾಯಿತಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖಾ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Vijaya Karnataka Web hassan assult gramapanchayat officer protest
ಗ್ರಾಪಂ ಅಧಿಕಾರಿ ಮೇಲೆ ಹಲ್ಲೆ :ಆರೋಪಿಗಳ ಬಂಧನಕ್ಕೆ ಮನವಿ


ಸಾಲಗಾಮೆ ಹೋಬಳಿ ಸೀಗೆ ಗ್ರಾಪಂ ಕಾರ್ಯದರ್ಶಿ ಗ್ರೇಡ್‌-1 ಪುಷ್ಪಲತಾ ಮಾ.1ರಂದು ಮಧ್ಯಾಹ್ನ 1.30 ಕ್ಕೆ ಅಧ್ಯಕ್ಷ ರು, ಉಪಾಧ್ಯಕ್ಷ ರು, ಪಿಡಿಒ, ಸದಸ್ಯರು ಬಿಲ್‌ ಕಲೆಕ್ಟರ್‌ಗಳೊಂದಿಗೆ ವಿಶೇಷ ಸಭೆ ನಡೆಸುತ್ತಿದ್ದರು. ಈ ವೇಳೆ ಗ್ರಾಪಂ ಸದಸ್ಯೆ ಕನಕ ಮಾಲಾ ಪತಿ ಕೃಷ್ಣೇಗೌಡ ಹಳೇ ದ್ವೇಷದ ಹಿನ್ನೆಲೆಯಲ್ಲಿ ಸಭೆಗೆ ಅನಧಿಕೃತ ಪ್ರವೇಶ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಪದಾಧಿಕಾರಿಗಳು ಆರೋಪಿಸಿದರು. ಗ್ರಾಪಂ ಸದಸ್ಯೆ ಸದಸ್ಯತ್ವ ರದ್ದುಮಾಡಿ ಕ್ರಮ ಜರುಗಿಸಬೇಕೆಂದು ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.

ಗ್ರಾಪಂನಲ್ಲಿ ಕಾರ್ಯದರ್ಶಿಯನ್ನು ಹಿಡಿದು ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಪದೇ ಪದೇ ಗ್ರಾಪಂ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವುದರಿಂದ ಆರೋಪಿಗಳ ವಿರುದ್ಧ ಪಂಚಾಯತ್‌ ರಾಜ್‌ ಅಧಿನಿಯಮ 1993 ಪ್ರಕರಣ 43 (ಎ) ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹಾಸನ ತಾಲೂಕಿನ ಪಿಡಿಒ ಮತ್ತು ಕಾರ್ಯದರ್ಶಿಗಳು ಹಾಜರಿದ್ದರು.

ಅನಿರ್ದಿಷ್ಟಾವಧಿ ಮುಷ್ಕರ: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ್ಯೂ ಮಿನರ್ವ ಮಿಲ್‌ ವರ್ಕರ್ಸ್‌ ಕಂಪನಿ ಕಾರ್ಮಿಕರು ನಗರದ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

5 ವರ್ಷದ ವೇತನದ ಒಪ್ಪಂದದ ಬಗ್ಗೆ ಇದುವರೆಗೂ ಗಮನ ನೀಡಿರುವುದಿಲ್ಲ. 500 ಜನ ಕಾರ್ಮಿಕರಲ್ಲಿ ಇದುವರೆಗೂ 190 ಕಾರ್ಮಿಕರನ್ನು ಮಾತ್ರ ಕಾಯಂ ಮಾಡಲಾಗಿದ್ದು ಉಳಿದವರನ್ನು ಕಾಯಂ ಮಾಡಲು ಮುಂದಾಗಬೇಕು. ಗುತ್ತಿಗೆ ಮೇಲೆ ಕೆಲಸ ಮಾಡುವುದನ್ನು ಕೂಡಲೇ ರದ್ದು ಪಡಿಸಿ, ಬೋನಸ್‌ ನೀಡುವುದನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಯೂನಿಯನ್‌ನ ಮಧು, ಮಂಜುನಾಥ್‌, ಸಂತೋಷ್‌, ಲೋಕೇಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ