ಬೇಲೂರು: ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆಯನ್ನು ಡಿ.23ರಂದು ಸೋಂಪುರ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಜೈ ಭಜರಂಗಿ ಯುವಕ ಸಂಘದ ಅಧ್ಯಕ್ಷ ಧರಣೇಶ್ ಗೌಡ ತಿಳಿಸಿದ್ದಾರೆ.
ವಿಜೇತರಿಗೆ ಪ್ರಥಮ ಬಹುಮಾನ 40 ಸಾವಿರ ರೂ., ದ್ವಿತೀಯ 30 ಸಾವಿರ, ತೃತೀಯ 20ಸಾವಿರ, ನಾಲ್ಕನೇ ಬಹುಮಾನ 10 ಸಾವಿರ, 5ನೇ ಸ್ಥಾನಕ್ಕೆ 5 ಸಾವಿರ ರೂ. ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಗುತ್ತದೆ. ಕಳೆದ ವರ್ಷ 40 ಜೋಡಿ ಎತ್ತುಗಳು ಪಾಲ್ಗೊಂಡಿದ್ದವು. ಈ ಬಾರಿ 60 ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಗ್ರಾಮೀಣ ರೈತರಿಗೆ ಉಪಯುಕ್ತವಾಗುವಂತೆ ಕೃಷಿ ವಿಚಾರ ಸಂವಾದ, ರಾಸುಗಳನ್ನು ಸಾಕುವುದು, ದೇಶಿ ತಳಿ ಹಸುಗಳ ಕುರಿತು ನುರಿತ ತಜ್ಞರಿಂದ ಉಪನ್ಯಾಸ, ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸ್ಪರ್ಥಿಗಳಿಗೆ ಊಟ, ಉಪಹಾರ, ರಾಸುಗಳಿಗೂ ಮೇವಿನ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುನಿ, ಕರುಣಸಾಗರ್, ಕರಣ್, ಶಶಿ ಮತ್ತಿತರರು ಹಾಜರಿದ್ದರು.
ವಿಜೇತರಿಗೆ ಪ್ರಥಮ ಬಹುಮಾನ 40 ಸಾವಿರ ರೂ., ದ್ವಿತೀಯ 30 ಸಾವಿರ, ತೃತೀಯ 20ಸಾವಿರ, ನಾಲ್ಕನೇ ಬಹುಮಾನ 10 ಸಾವಿರ, 5ನೇ ಸ್ಥಾನಕ್ಕೆ 5 ಸಾವಿರ ರೂ. ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಗುತ್ತದೆ. ಕಳೆದ ವರ್ಷ 40 ಜೋಡಿ ಎತ್ತುಗಳು ಪಾಲ್ಗೊಂಡಿದ್ದವು. ಈ ಬಾರಿ 60 ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಗ್ರಾಮೀಣ ರೈತರಿಗೆ ಉಪಯುಕ್ತವಾಗುವಂತೆ ಕೃಷಿ ವಿಚಾರ ಸಂವಾದ, ರಾಸುಗಳನ್ನು ಸಾಕುವುದು, ದೇಶಿ ತಳಿ ಹಸುಗಳ ಕುರಿತು ನುರಿತ ತಜ್ಞರಿಂದ ಉಪನ್ಯಾಸ, ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸ್ಪರ್ಥಿಗಳಿಗೆ ಊಟ, ಉಪಹಾರ, ರಾಸುಗಳಿಗೂ ಮೇವಿನ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುನಿ, ಕರುಣಸಾಗರ್, ಕರಣ್, ಶಶಿ ಮತ್ತಿತರರು ಹಾಜರಿದ್ದರು.