ಹಾಸನ: ಹಾಸನ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಪ್ರಥಮಬಾರಿ ಆಗಮಿಸಲಿದ್ದು, ಶೀಘ್ರದಲ್ಲೇ ದಿನಾಂಕ ನಿಗದಿಯಾಗಲಿದೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.
ಜಿಲ್ಲೆಯ ಜನರಲ್ಲಿ ಜೆಡಿಎಸ್ ಬಗ್ಗೆ ಅಸಮಾಧಾನವಿದೆ. ಜೆಡಿಎಸ್ ಪರ ಮತ್ತು ವಿರುದ್ಧ ಎಂಬ ಎರಡು ಗುಂಪು ಅವರ ಪಕ್ಷದಲ್ಲೇ ಇದೆ. ಪರ ಎಂದರೆ ಗುತ್ತಿಗೆ ಸಿಕ್ಕಿದವರು, ವಿರೋಧ ಎಂದರೆ ಸಿಕ್ಕದವರು. ನಾನೇನು ಆಕಸ್ಮಿಕವಾಗಿ, ಚೀಟಿ ಅಥವಾ ಲಾಟರಿ ಎತ್ತಿ ಶಾಸಕನಾಗಿಲ್ಲ. ಜನತೆಯ ವಿಶ್ವಾಸಗಳಿಸಿ 5 ವರ್ಷಗಳಿಂದ ಹಗಲು,ರಾತ್ರಿ ಸಮಾಜಸೇವೆ ಮಾಡಿ ಸ್ಥಾನ ಅಲಂಕರಿಸಿದ್ದೇನೆ ಎಂದು ಜೆಡಿಎಸ್ ಮುಖಂಡರಿಗೆ ಸುದ್ದಿಗೋಷ್ಠಿಯಲ್ಲಿ ಟಾಂಗ್ ನೀಡಿದರು.
ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಪರಿಸ್ಥಿತಿ ಬಿಜೆಪಿಗೆ ಪೂರಕವಾಗಿದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗುವರು. ಚುನಾವಣೆ ಫಲಿತಾಂಶ ಆಶಾದಾಯಕವಾಗಿರಲಿದ್ದು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲಿದೆ. ಎ.ಮಂಜು ಪಕ್ಷ ದ ಅಭ್ಯರ್ಥಿಯಾದ ನಂತರ ಹಲವು ವರ್ಷಗಳಿಂದ ಕಡೆಗಣಿಸಿದ್ದ ಕಾಂಗ್ರೆಸ್ ನಾಯಕರ ಮನೆ ಬಾಗಿಲಿಗೆ ಹೋಗಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ತಮ್ಮ ಮುಖಂಡರನ್ನು ಓಲೈಕೆ ಮಾಡಿದರೆ ಕಾರ್ಯಕರ್ತರು ಹೇಗೆ ಒಪ್ಪಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಎಲ್ಲ ಪಕ್ಷ ಗಳಲ್ಲೂ ಟೀಕೆ, ಟಿಪ್ಪಣಿಗಳು ಸಹಜ. ಒಮ್ಮೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರೇ ತಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂದು ಒಪ್ಪಿಕೊಂಡು ಬಹಿರಂಗವಾಗಿ ಹೇಳಿರಲಿಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಮರು ಪ್ರಶ್ನೆ ಹಾಕಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಯೋಗಾ ರಮೇಶ್ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಅಸಮಾಧಾನ ಕುರಿತು ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮುರಳೀ ಮನೋಹರ್, ಸಿ.ಟಿ.ರವಿ ಸೇರಿದಂತೆ ಹಲವರು ಮಾತುಕತೆ ನಡೆಸಿದ್ದಾರೆ. ಚಿಕ್ಕಪುಟ್ಟ ಗೊಂದಲಗಳಿದ್ದರೆ ನಾಲ್ಕು ಗೋಡೆಗಳ ಮಧ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.
ನಾಳೆ ನಾಮಪತ್ರ ಸಲ್ಲಿಕೆ: ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ಮಂಜು ಅವರು 25 ರ ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸುವರು. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಲಿದ್ದು ಕಲಾಭವನದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರೆವಣಿಗೆ ಮಾಡಲಾಗುವುದು. ಯುವಕರು, ಅಭಿಮಾನಿಗಳು ಹಾಗೂ ಹಿತೈಷಿಗಳು ಆಶೀರ್ವದಿಸಬೇಕು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಇಷ್ಟೇನ ಶಕ್ತಿ ಇಂದು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಜೆಡಿಎಸ್ ಕುಟುಕಿದರು. ಇದು ದೇಶದ ಚುನಾವಣೆ. ದೇಶವಿದ್ದರೆ ನಾವು ಎಂಬ ಭಾವನೆ ಎಲ್ಲ ವರ್ಗದ ಜನರಲ್ಲಿದೆ. ಜಿಲ್ಲೆಗೆ ಐಐಟಿ ತರಲು ಜೆಡಿಎಸ್ ವರಿಷ್ಠ ಐದು ಬಾರಿ ಪ್ರಧಾನಿ ಭೇಟಿ ಮಾಡಿದರೂ ಸಾಧ್ಯವಾಗಲಿಲ್ಲ ಎಂಬ ಬೇಸರದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ ಅದು ಅವರ ವೈಫಲ್ಯ. ಉಳಿದುದೆಲ್ಲವನ್ನು ನಾವೇ ಮಾಡಿಸಿಬಿಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುವವರು ಐಐಟಿ ಏಕೆ ತರಲು ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.
ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ, ಮಾಜಿ ಶಾಸಕ ದತ್ತ ಅವರ ಶಕ್ತಿ ಕುಂದಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಎಂಟು ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿದರೂ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದರು.
ರೇಣುಕುಮಾರ, ಪ್ರಸನ್ನ ಕುಮಾರ, ಪ್ರಶಾಂತ್, ವೇಣುಗೋಪಾಲ್ ಹಾಜರಿದ್ದರು.
ಜಿಲ್ಲೆಯ ಜನರಲ್ಲಿ ಜೆಡಿಎಸ್ ಬಗ್ಗೆ ಅಸಮಾಧಾನವಿದೆ. ಜೆಡಿಎಸ್ ಪರ ಮತ್ತು ವಿರುದ್ಧ ಎಂಬ ಎರಡು ಗುಂಪು ಅವರ ಪಕ್ಷದಲ್ಲೇ ಇದೆ. ಪರ ಎಂದರೆ ಗುತ್ತಿಗೆ ಸಿಕ್ಕಿದವರು, ವಿರೋಧ ಎಂದರೆ ಸಿಕ್ಕದವರು. ನಾನೇನು ಆಕಸ್ಮಿಕವಾಗಿ, ಚೀಟಿ ಅಥವಾ ಲಾಟರಿ ಎತ್ತಿ ಶಾಸಕನಾಗಿಲ್ಲ. ಜನತೆಯ ವಿಶ್ವಾಸಗಳಿಸಿ 5 ವರ್ಷಗಳಿಂದ ಹಗಲು,ರಾತ್ರಿ ಸಮಾಜಸೇವೆ ಮಾಡಿ ಸ್ಥಾನ ಅಲಂಕರಿಸಿದ್ದೇನೆ ಎಂದು ಜೆಡಿಎಸ್ ಮುಖಂಡರಿಗೆ ಸುದ್ದಿಗೋಷ್ಠಿಯಲ್ಲಿ ಟಾಂಗ್ ನೀಡಿದರು.
ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಪರಿಸ್ಥಿತಿ ಬಿಜೆಪಿಗೆ ಪೂರಕವಾಗಿದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗುವರು. ಚುನಾವಣೆ ಫಲಿತಾಂಶ ಆಶಾದಾಯಕವಾಗಿರಲಿದ್ದು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲಿದೆ. ಎ.ಮಂಜು ಪಕ್ಷ ದ ಅಭ್ಯರ್ಥಿಯಾದ ನಂತರ ಹಲವು ವರ್ಷಗಳಿಂದ ಕಡೆಗಣಿಸಿದ್ದ ಕಾಂಗ್ರೆಸ್ ನಾಯಕರ ಮನೆ ಬಾಗಿಲಿಗೆ ಹೋಗಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ತಮ್ಮ ಮುಖಂಡರನ್ನು ಓಲೈಕೆ ಮಾಡಿದರೆ ಕಾರ್ಯಕರ್ತರು ಹೇಗೆ ಒಪ್ಪಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಎಲ್ಲ ಪಕ್ಷ ಗಳಲ್ಲೂ ಟೀಕೆ, ಟಿಪ್ಪಣಿಗಳು ಸಹಜ. ಒಮ್ಮೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರೇ ತಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂದು ಒಪ್ಪಿಕೊಂಡು ಬಹಿರಂಗವಾಗಿ ಹೇಳಿರಲಿಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಮರು ಪ್ರಶ್ನೆ ಹಾಕಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಯೋಗಾ ರಮೇಶ್ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಅಸಮಾಧಾನ ಕುರಿತು ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮುರಳೀ ಮನೋಹರ್, ಸಿ.ಟಿ.ರವಿ ಸೇರಿದಂತೆ ಹಲವರು ಮಾತುಕತೆ ನಡೆಸಿದ್ದಾರೆ. ಚಿಕ್ಕಪುಟ್ಟ ಗೊಂದಲಗಳಿದ್ದರೆ ನಾಲ್ಕು ಗೋಡೆಗಳ ಮಧ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.
ನಾಳೆ ನಾಮಪತ್ರ ಸಲ್ಲಿಕೆ: ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ಮಂಜು ಅವರು 25 ರ ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸುವರು. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಲಿದ್ದು ಕಲಾಭವನದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರೆವಣಿಗೆ ಮಾಡಲಾಗುವುದು. ಯುವಕರು, ಅಭಿಮಾನಿಗಳು ಹಾಗೂ ಹಿತೈಷಿಗಳು ಆಶೀರ್ವದಿಸಬೇಕು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಇಷ್ಟೇನ ಶಕ್ತಿ ಇಂದು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಜೆಡಿಎಸ್ ಕುಟುಕಿದರು. ಇದು ದೇಶದ ಚುನಾವಣೆ. ದೇಶವಿದ್ದರೆ ನಾವು ಎಂಬ ಭಾವನೆ ಎಲ್ಲ ವರ್ಗದ ಜನರಲ್ಲಿದೆ. ಜಿಲ್ಲೆಗೆ ಐಐಟಿ ತರಲು ಜೆಡಿಎಸ್ ವರಿಷ್ಠ ಐದು ಬಾರಿ ಪ್ರಧಾನಿ ಭೇಟಿ ಮಾಡಿದರೂ ಸಾಧ್ಯವಾಗಲಿಲ್ಲ ಎಂಬ ಬೇಸರದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ ಅದು ಅವರ ವೈಫಲ್ಯ. ಉಳಿದುದೆಲ್ಲವನ್ನು ನಾವೇ ಮಾಡಿಸಿಬಿಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುವವರು ಐಐಟಿ ಏಕೆ ತರಲು ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.
ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ, ಮಾಜಿ ಶಾಸಕ ದತ್ತ ಅವರ ಶಕ್ತಿ ಕುಂದಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಎಂಟು ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿದರೂ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದರು.
ರೇಣುಕುಮಾರ, ಪ್ರಸನ್ನ ಕುಮಾರ, ಪ್ರಶಾಂತ್, ವೇಣುಗೋಪಾಲ್ ಹಾಜರಿದ್ದರು.