ಆ್ಯಪ್ನಗರ

ಸಡಗರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ

ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕುಂದೂರಿನಲ್ಲಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

Vijaya Karnataka 14 Dec 2018, 5:00 am
ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕುಂದೂರಿನಲ್ಲಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
Vijaya Karnataka Web hassan channarayapattana dandiganahalli fair festival
ಸಡಗರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ


ಆದಿಚುಂಚನಗಿರಿ ಹಾಸನ ಶಾಖಾ ಮಠದ ಕಾರ‍್ಯದರ್ಶಿಗಳಾದ ಶಂಭುನಾಥ ಸ್ವಾಮೀಜಿ, ಕಬ್ಬಳಿಯ ಶಿವಪುತ್ರನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಸುಬ್ರಹ್ಮಣ್ಯೇಶ್ವರಸ್ವಾಮಿಯನ್ನು ರಥದಲ್ಲಿ ಕೂರಿಸಿ ದೇವಾಲಯದ ಎದುರಿನ ಆವರಣದಲ್ಲಿ ರಥವನ್ನು ಭಕ್ತರು ಎಳೆದರು.

ರಥೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಗ್ಗಿನಿಂದಲೇ ಎಲ್ಲ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಭಿಷೇಕ ಹಾಗೂ ಅಲಂಕಾರ ಮಾಡಲಾಗಿತ್ತು. ಸಂಜೆ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಸುತ್ತಲ ಗ್ರಾಮಗಳಾದ ಕರಡೇವು, ಬೆಳಗುಲಿ, ಚೌಳಗಾಲ, ಅಗ್ರಹಾರ, ಅಂಕೇನಹಳ್ಳಿ, ಮೂಡನಹಳ್ಳಿ, ಗ್ಯಾರಹಳ್ಳಿ, ತಿಮ್ಲಾಪುರ ಸೇರಿದಂತೆ ಹಲವು ಗ್ರಾಮಗಳಿಂದ ಭಕ್ತರು ಆಗಮಿಸಿದ್ದರು.

ಹರಕೆ ಹೊತ್ತ ಹೆಣ್ಣು ಮಕ್ಕಳು ದೇವರಿಗೆ ತಂಬಿಟ್ಟಿನ ಆರತಿ ತಂದು ಬೆಳಗಿದರು. ರಥೋತ್ಸವದ ಅಂಗವಾಗಿ ರಾತ್ರಿ ಅಲಂಕೃತ ಮಂಟಪದಲ್ಲಿ ದೇವರನ್ನು ಕೂರಿಸಿ ಸರ್ಪವಾಹನೋತ್ಸವ ನಡೆಸಲಾಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದಲ್ಲಿರುವ ಸುಬ್ರಹ್ಮಣ್ಯೇಶ್ವರ, ರಂಗನಾಥಸ್ವಾಮಿ ಹಾಗೂ ಮೆಳಿಯಮ್ಮ ದೇವಾಲಯಗಳನ್ನು ಮತ್ತು ಕುಂದೂರು ಮಠದ ಕಟ್ಟಡಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಅಂಗಡಿ ಮುಂಗಟ್ಟುಗಳು ಜಾತ್ರೆಗೆ ಮೆರುಗು ನೀಡಿದವು.

ಕಂದಾಯ ಇಲಾಖೆ ನಿವೃತ್ತ ಅಧೀನ ಕಾರ‍್ಯದರ್ಶಿ ಪ್ರಭಾಕರ್‌, ರಾಜ್ಯ ಮಾರಾಟ ಮಹಾಮಂಡಲದ ನಿರ್ದೇಶಕರಾದ ಕರಡೇವು ಮಂಜುನಾಥ್‌ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ