ಆ್ಯಪ್ನಗರ

ಸರಕಾರಿ ವಿಜ್ಞಾನ ಕಾಲೇಜಿಗೆ ನ್ಯಾಕ್‌ ಸಮಿತಿ ಭೇಟಿ

ಸರಕಾರಿ ವಿಜ್ಞಾನ ಕಾಲೇಜಿಗೆ ನ್ಯಾಕ್‌ ಸಮಿತಿ ಭೇಟಿ *ಕಾಲೇನಿಂದ ಕೈಗೊಂಡಿರುವ ಚಟುವಟಿಕೆಗಳಿಗೆ ಮೆಚ್ಚುಗೆ ವಿಕ ಸುದ್ದಿಲೋಕ ಹಾಸನ ನಗರದ ಸರಕಾರಿ ವಿಜ್ಞಾನ ಕಾಲೇಜಿನಲ್ಲಿ ...

Vijaya Karnataka 15 Oct 2018, 5:00 am
ಹಾಸನ: ನಗರದ ಸರಕಾರಿ ವಿಜ್ಞಾನ ಕಾಲೇಜಿನಲ್ಲಿ ಮೂರನೇ ಆವೃತ್ತಿಯ ನ್ಯಾಕ್‌ ಮೌಲ್ಯಮಾಪನ ಪ್ರಕ್ರಿಯೆಗಾಗಿ ತಜ್ಞರ ಸಮಿತಿ ಈಚೆಗೆ ಕಾಲೇಜಿಗೆ ಭೇಟಿ ನೀಡಿ ವಿವಿಧ ವಿಭಾಗಗಳು ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿ ಮಾಹಿತಿ ಪಡೆಯಿತು.
Vijaya Karnataka Web hassan government scince college nac committee visist hand over report
ಸರಕಾರಿ ವಿಜ್ಞಾನ ಕಾಲೇಜಿಗೆ ನ್ಯಾಕ್‌ ಸಮಿತಿ ಭೇಟಿ


ನ್ಯಾಕ್‌ ಸಮಿತಿಯ ಅಧ್ಯಕ್ಷ ರಾಗಿ ಪಾಟ್ನಾ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಡಾಲಿ ಸಿನ್ಹಾ, ಸದಸ್ಯ ಸಂಯೋಜಕರಾಗಿ ಭಾರತಿದಾಸನ್‌, ವಿಶ್ವವಿದ್ಯಾನಿಲಯದ ಸಮೂಹ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಡಾ. ಶ್ರೀನಿವಾಸ ರಾಘವನ್‌ ಮತ್ತು ಸದಸ್ಯರಾಗಿ ರಾಮಕೃಷ್ಣ ಮಿಷನ್‌ ವಿವೇಕಾನಂದ ಸೆಂಟಿನರಿ ಕಾಲೇಜು, ಕೊಲ್ಕತ್ತಾ ಪ್ರಾಂಶುಪಾಲ ಡಾ.ಸ್ವಾಮಿ ಕಮಲಾಸ್ಥಾನಂದ ಇದ್ದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು ತಮ್ಮ ತಮ್ಮ ವಿಭಾಗದ ಪ್ರಗತಿಯ ವಿವರಗಳನ್ನು ಸಮಿತಿಗೆ ಪರಿಚಯಿಸಿದರು. ನಂತರ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಾಸಕ ಪ್ರೀತಂ ಜೆ. ಗೌಡ, ಕಾಲೇಜು ಶಿಕ್ಷ ಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಶ್ರೀಶಕುಮಾರ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲ ಸದಸ್ಯರೊಂದಿಗೆ ಸಂವಾದ ನಡೆಸಿದರು. ನಂತರ ಕಾಲೇಜಿನ ಹಳೇ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಾಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಂಸ್ಥೆಯ ಬಗ್ಗೆ ವಿವರಗಳನ್ನು ಪಡೆದರು. ಸಂಜೆ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾ¿åರ್‍ಕ್ರಮಗಳನ್ನು ವೀಕ್ಷಿಸಿದರು. ಮಹಿಳಾ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ದತ್ತು ಗ್ರಾಮವಾದ ಎಸ್‌. ತಿಮ್ಮನಹಳ್ಳಿಗೆ ಭೇಟಿ ನೀಡಿ ಅಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು.

ನಂತರ ನಡೆದ ನಿರ್ಗಮನ ಸಭೆಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಡಾ. ಡಾಲಿ ಸಿನ್ಹಾ , ಕಾಲೇಜಿನ ಎಲ್ಲ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಾಪಕರು ನಿರಂತರ ಅಧ್ಯಯನ, ಸಮಗ್ರ ಚಿಂತನೆಗಳೊಂದಿಗೆ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಶೈಕ್ಷ ಣಿಕ ಚಟುವಟಿಕೆಗಳಲ್ಲಿ ಉತ್ತಮ ಪ್ರಗತಿಯನ್ನು ತೋರಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಒಟ್ಟಿನಲ್ಲಿ ಸಂಸ್ಥೆಯ ಎಲ್ಲ ಫಲಾನುಭವಿಗಳು ಸೌಹಾರ್ದ ಸಂಬಂಧವನ್ನು ಇಟ್ಟುಕೊಂಡು ಕಾಲೇಜಿನ ಸಮಗ್ರ ಪ್ರಗತಿಗಾಗಿ ನಿರಂತರ ಪ್ರಯತ್ನವನ್ನು ಮಾಡುತ್ತಿರುವುದು ಎಲ್ಲ ಕಾಲೇಜುಗಳಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ