ಆ್ಯಪ್ನಗರ

ಇಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

ಇಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ ------------------ ವಿಕ ಸುದ್ದಿಲೋಕ ಹಾಸನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ...

Vijaya Karnataka 25 Oct 2018, 5:00 am
ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.25ರಂದು ದೇಶಾದ್ಯಂತ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುತ್ತಿಗೆ ನೌಕರರ ಸಮಿತಿಯ ಸಂಚಾಲಕ ಯಶ್ವಂತ್‌ ತಿಳಿಸಿದರು.
Vijaya Karnataka Web hassan health department contract out source employees protest october 25th
ಇಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ


ಸಾರ್ವಜನಿಕ ಆರೋಗ್ಯ ಇಲಾಖೆ ಬಲಗೊಳ್ಳಬೇಕು, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲರಿಗೂ ಆರೋಗ್ಯ ಎಂಬ ಉದ್ದೇಶದಿಂದ 2005ರಲ್ಲಿ ದೇಶದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಸ್ಥಾಪನೆಯಾಗಿದೆ. ಇದರಡಿ ಹಲವು ರಾಷ್ಟ್ರೀಯ ಆರೋಗ್ಯಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಈ ಮಹತ್ತರ ಉದ್ದೇಶವನ್ನು ಸಾಧಿಸಲು ಸಾರ್ವಜನಿಕ ಆರೋಗ್ಯ ಇಲಾಖೆಯನ್ನು ಮತ್ತಷ್ಟು ಸಶಕ್ತಗೊಳಿಸುವ ಸಲುವಾಗಿ ನಿಷ್ಠೆಯಿಂದ ಕೆಲಸ ಮಾಡಲು ಆರೋಗ್ಯ ಇಲಾಖೆಯಡಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರೆಲ್ಲರೂ ಪಣ ತೊಟ್ಟಿದ್ದೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರ ಸಂಖ್ಯೆ ಕಾಯಂ ನೌಕರರಿಗಿಂತ ಹೆಚ್ಚಿದೆ. ನಾನಾ ರೀತಿಯ ಒತ್ತಡಕ್ಕೆ ಒಳಗಾಗಿ ಕೆಲಸ ಮಾಡುವ ಎಲ್ಲ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಕೆಸದ ಸ್ಥಳದಲ್ಲಿ ಘನತೆ, ಸಮಾನ ವೇತನವನ್ನು ಖಾತರಿ ಮಾಡಬೇಕು ಎಂದು ಸುಪ್ರೀಂಕೋರ್ಟ್‌ 2016ರಲ್ಲಿ ಆದೇಶಿಸಿದ್ದರೂ ಅದು ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.

ಜೀತ ವ್ಯವಸ್ಥೆಯ ಬದಲಾದ ರೂಪವೇ ಗುತ್ತಿಗೆ ಪದ್ಧತಿ. ಕೆಲಸ ಮಾಡಿದರೂ ಭದ್ರತೆ ಇಲ್ಲವಾಗಿದೆ. ಕೊನೆಗೆ ಇಲಾಖೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ಹೊರ ದೂಡುವ ಸ್ಥಿತಿ ಇದೆ. ಹೀಗಾಗಿ ಸಾರ್ವಜನಿಕ ಆರೋಗ್ಯ ಇಲಾಖೆ ಬಲಗೊಳ್ಳಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ದೇಶಾದ್ಯಂತ ಧರಣಿ ಹಮ್ಮಿಕೊಂಡಿದ್ದು ಜಿಲ್ಲೆಯಲ್ಲೂ ನಡೆಯಲಿದೆ ಎಂದು ಹೇಳಿದರು.

ಸಮಿತಿಯ ಅಧ್ಯಕ್ಷ ಡಿ. ವೆಂಕಟೇಶ್‌, ಗೌರವಾಧ್ಯಕ್ಷ ಡಾ.ನಾಗೇಶ್‌, ಉಪಾಧ್ಯಕ್ಷರಾದ ಶೋಭಾ, ಮಂಜುನಾಥ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ