ಆ್ಯಪ್ನಗರ

ಸ್ಟ್ರಾಂಗ್‌ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ

ಹಾಸನ: ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಹಾಸನ ಕ್ಷೇತ್ರದ ಮತಯಂತ್ರಗಳನ್ನು ನಗರದ ಸರಕಾರಿ ಎಂಜಿನಿಯರಿಂಗ್‌ ಕಾಲೇಜು ಕಟ್ಟಡದಲ್ಲಿ ಭದ್ರವಾಗಿರಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಚುನಾವಣಾ ವೀಕ್ಷ ಕ ಶಶಿಭೂಷಣ್‌ ಕುಮಾರ್‌ ಮತ್ತು ಮಂಜಿತ್‌ ಸಿಂಗ್‌ ಬ್ರಾರ್‌ ಅವರ ಸಮ್ಮುಖದಲ್ಲಿ ಶುಕ್ರವಾರ ಭದ್ರತಾ ಕೊಠಡಿಗೆ ಮುದ್ರೆ ಹಾಕಲಾಯಿತು.

Vijaya Karnataka 20 Apr 2019, 5:00 am
ಹಾಸನ: ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಹಾಸನ ಕ್ಷೇತ್ರದ ಮತಯಂತ್ರಗಳನ್ನು ನಗರದ ಸರಕಾರಿ ಎಂಜಿನಿಯರಿಂಗ್‌ ಕಾಲೇಜು ಕಟ್ಟಡದಲ್ಲಿ ಭದ್ರವಾಗಿರಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಚುನಾವಣಾ ವೀಕ್ಷ ಕ ಶಶಿಭೂಷಣ್‌ ಕುಮಾರ್‌ ಮತ್ತು ಮಂಜಿತ್‌ ಸಿಂಗ್‌ ಬ್ರಾರ್‌ ಅವರ ಸಮ್ಮುಖದಲ್ಲಿ ಶುಕ್ರವಾರ ಭದ್ರತಾ ಕೊಠಡಿಗೆ ಮುದ್ರೆ ಹಾಕಲಾಯಿತು.
Vijaya Karnataka Web hassan lokasabha election strong room evm machine
ಸ್ಟ್ರಾಂಗ್‌ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ


8 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಅತ್ಯಂತ ಭದ್ರತೆಯಲ್ಲಿ ತರಲಾಗಿದ್ದು, ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಕಟ್ಟಡಕ್ಕೆ ವಿಶೇಷ ಭಧ್ರತಾ ಪಡೆ. ಪೊಲೀಸ್‌ ತಂಡ ಹಾಗೂ ಸಿಸಿಟಿವಿ ಕಣ್ಗಾವಲು ಇರಿಸಲಾಯಿತು. ಮತಯಂತ್ರಗಳು ಸ್ಟ್ರಾಂಗ್‌ ರೂಂ ಸೇರಿದ ನಂತರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಜರಿದ್ದು ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದರು.

ಅಪರ ದಂಡಾಧಿಕಾರಿ ಎಂ.ಎಲ್‌.ವೈಶಾಲಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಹಾಗೂ ಎಂಸಿಸಿ ನೋಡಲ್‌ ಅಧಿಕಾರಿ ಪ್ರಿಯಾಂಗ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿ ಕವಿತಾ ರಾಜಾ ರಾಮ್‌, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ, ತಹಸೀೕಲ್ದಾರ್‌ ಮೇಘನಾ, ಶಿರಿನ್‌ತಾಜ್‌ ಹಾಜರಿದ್ದರು.

ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಶಾಂತಿಯುತ ಹಾಗೂ ನಿಷ್ಪಕ್ಷ ಪಾತ ಚುನಾವಣೆ ನಡೆಸಲು ಸಹಕರಿಸಿದ ಚುನಾವಣಾ ವೀಕ್ಷ ಕರು, ಎಲ್ಲ ತಂಡಗಳ ಮುಖ್ಯಸ್ಥರು, ಅಧಿಕಾರಿದ ಸಿಬ್ಬಂದಿ, ಸಾರ್ವಜನಿಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಜಿಲ್ಲಾ ಸ್ಪೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ಡಾ. ಕೆ.ಎನ್‌. ವಿಜಯ ಪ್ರಕಾಶ್‌ ಅವರು ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ ಹಾಗೂ ಮತದಾನ ಪ್ರಮಾಣ ಕಳೆದ ಚುನಾವಣೆಗಿಂತ ಹೆಚ್ಚಾಗಿದ್ದು ಸಹಕರಿಸಿದ ಎಲ್ಲ ಸ್ಪೀಪ್‌ ಸಮಿತಿಯ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ