ಆ್ಯಪ್ನಗರ

ಎಕ್ಕಾ ರಾಜಾ ರಾಣಿ ನಿನ್ನ ಕೈಯೊಳಗ, ಹಿಡಿ ಮಣ್ಣು ನಿನ್ನ ಬಾಯೊಳಗ! ಇಸ್ಪೀಟ್‌ ಆಟ ಕೊಲೆಯಲ್ಲಿ ಅಂತ್ಯ!

ಶವವನ್ನು ಬೂರಿಕೆರೆಯ ಬಾವಿಗೆ ಶವ ಎಸೆಯಲಾಗಿತ್ತು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಲಿಯಲ್ಲಿ ಈ ಘಟನೆ ನಡೆದಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹತ್ಯೆಯ ಬಳಿಕ ನಾಗರಾಜ್​ ಗ್ರಾಮದಿಂದ ನಾಪತ್ತೆಯಾಗಿದ್ದ. ಹೀಗಾಗಿ ಕೊಲೆ ಮಾಡಿ ಊರು ಬಿಟ್ಟಿದ್ದವನನ್ನು, ಘಟನೆ ನಡೆದ ಮೂರನೇ ದಿನಕ್ಕೆ ಪೊಲೀಸರು ಬೆನ್ನಟ್ಟಿ ಬಂದಿಸಿದ್ದಾರೆ.

Vijaya Karnataka Web 22 Jan 2021, 2:52 pm
ಹಾಸನ: ಹೊಳೆನರಸೀಪುರ ತಾಲೂಕು ಮಾರಗೋಡನಹಳ್ಳಿಯಲ್ಲಿ ನಡೆದಿದ್ದ ಕೊಲೆ ಕಾರಣವನ್ನು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಕೇವಲ 800 ರೂ. ಕಿತ್ತಾಟವಾಗಿ ನಾಗರಾಜ ಎಂಬಾತ ಮೂರ್ತಿಯನ್ನು ಕೊಲೆ ಮಾಡಿದ್ದ ಎನ್ನಲಾಗಿದೆ. ಜ.17ರಂದು ಜೂಜಾಟದ ವೇಳೆ ನಾಗರಾಜ 800 ರೂ. ಗೆದ್ದುಕೊಂಡು ಮನೆಗೆ ಹೊರಟಾಗ ತನ್ನಿಂದ ಹಣ ಹೊಡೆದುಕೊಂಡು ಹೋಗುತ್ತಿದ್ದೀಯಾ ಎಂದು ಜಗಳ ತೆಗೆದ ಮೂರ್ತಿ ಕಲ್ಲು ತೆಗೆದುಕೊಂಡು ನಾಗರಾಜನ ಮೇಲೆ ಎತ್ತಿಹಾಕಿದ್ದ.
Vijaya Karnataka Web nagaraj


ಇದರಿಂದ ಕೋಪಕೊಂಡ ನಾಗರಾಜ, ಮೂರ್ತಿಯ ಮುಖಕ್ಕೆ ಹೊಡೆದು, ಕಾಲಿನಿಂದ ಒದ್ದಾಗ ಕೆಳಕ್ಕೆ ಬಿದ್ದ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದ. ಶವವನ್ನು ಬೂರಿಕೆರೆಯ ಬಾವಿಗೆ ಶವ ಎಸೆಯಲಾಗಿತ್ತು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಲಿಯಲ್ಲಿ ಈ ಘಟನೆ ನಡೆದಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹತ್ಯೆಯ ಬಳಿಕ ನಾಗರಾಜ್ ಗ್ರಾಮದಿಂದ ನಾಪತ್ತೆಯಾಗಿದ್ದ. ಹೀಗಾಗಿ ಕೊಲೆ ಮಾಡಿ ಊರು ಬಿಟ್ಟಿದ್ದವನನ್ನು, ಘಟನೆ ನಡೆದ ಮೂರನೇ ದಿನಕ್ಕೆ ಪೊಲೀಸರು ಬೆನ್ನಟ್ಟಿ ಬಂದಿಸಿದ್ದಾರೆ.

ಹಾಸನ: ಕಾಡಾನೆಗೆ ರೇಡಿಯೋ ಕಾಲರ್ ಹಾಕುವ ಕಾರ್ಯಾಚರಣೆ ವಿಫಲ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ