ಆ್ಯಪ್ನಗರ

ಕಾಡುಹಂದಿ ದಾಳಿ: ರೈತರಿಗೆ ಗಾಯ

ವನಗೂರು(ಸಕಲೇಶಪುರ): ತಾಲೂಕಿನ ಹೆತ್ತೂರು ಹೋಬಳಿಯ ಬಿಸಿಲೆ ಘಾಟ್‌ ಸಮೀಪದ ಆನೆಗುಂಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

Vijaya Karnataka 6 Dec 2018, 5:00 am
ವನಗೂರು(ಸಕಲೇಶಪುರ): ತಾಲೂಕಿನ ಹೆತ್ತೂರು ಹೋಬಳಿಯ ಬಿಸಿಲೆ ಘಾಟ್‌ ಸಮೀಪದ ಆನೆಗುಂಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
Vijaya Karnataka Web hassan sakaleshapura vanguru wild boar formers injure
ಕಾಡುಹಂದಿ ದಾಳಿ: ರೈತರಿಗೆ ಗಾಯ


ಘಟನೆ ಹಿನ್ನಲೆ: ಗ್ರಾಮದ ತಮ್ಮಣ್ಣ ಗೌಡ ಎಂಬುವವರು ಗದ್ದೆ (ಏಲಕ್ಕಿ ಮಡಿ) ಯಲ್ಲಿ ಕೆಲಸ ಮಾಡುವಾಗ ಬುಧವಾರ ಬೆಳಗ್ಗೆ 7ಕ್ಕೆ ಕಾಡು ಹಂದಿಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು ರೈತನ ತೊಡೆ ಹಾಗೂ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಇದೇ ಸಮಯದಲ್ಲಿ ಕಾಡು ಹಂದಿ ದಾಳಿಯಿಂದ ತಮ್ಮಣ್ಣನನ್ನು ರಕ್ಷಿಸಲು ಬಂದ ಮತ್ತೊಬ್ಬ ರೈತ ಜಯಪ್ಪಗೌಡ ಅವರ ಮೇಲು ದಾಳಿ ಮಾಡಿದ್ದು ಗಾಯಗೊಂಡ ಇಬ್ಬರು ರೈತರನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಸಾಗಿಸಲಾಗಿದೆ.

ಪರಿಹಾರಕ್ಕೆ ಆಗ್ರಹ: ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ರೈತರು ಇಬ್ಬರಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಚಿಕಿತ್ಸೆ ನೀಡಿ ಪರಿಹಾರ ನೀಡಬೇಕು ಎಂದು ಸ್ಥಳೀಯರು, ಪರಿಸರ ಪ್ರೇಮಿ ಗೊದ್ದು ಉಮೇಶ್‌ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ