ಆ್ಯಪ್ನಗರ

ಸಕಲೇಶಪುರ: ರೈತ ಆತ್ಮಹತ್ಯೆ

ರೈತ ಆತ್ಮಹತ್ಯೆ ವಿಕ ಸುದ್ದಿಲೋಕ ಸಕಲೇಶಪುರ ವಿಪರೀತ ಮಳೆಯಿಂದ ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ಕಂಗಾಲಾದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ...

Vijaya Karnataka 28 Aug 2018, 5:00 am
ಸಕಲೇಶಪುರ: ವಿಪರೀತ ಮಳೆಯಿಂದ ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ಕಂಗಾಲಾದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡನಾಗರ ಗ್ರಾಮದಲ್ಲಿ ನಡೆದಿದೆ.
Vijaya Karnataka Web hassan sakaleshpuara doddanagara former suicide
ಸಕಲೇಶಪುರ: ರೈತ ಆತ್ಮಹತ್ಯೆ


ಮಂಜುನಾಥ್‌(55) ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಭತ್ತದ ಗದ್ದೆಗೆ ಹಾನಿಯಾಗಿತ್ತು. ತೋಟದಲ್ಲಿ ಕಾಫಿ, ಮೆಣಸು ಹಾಗೂ ಇತರೆ ಬೆಳೆಗಳು ನೆಲಕಚ್ಚಿದ್ದರಿಂದ ಉಂಟಾದ ನಷ್ಟದಿಂದ ಕಂಗಾಲಾಗಿದ್ದರು. ಪಟ್ಟಣದ ಪಿಎಲ್‌ಡಿ ಬ್ಯಾಂಕ್‌ನಲ್ಲಿ 1 ಲಕ್ಷ ಸೇರಿದಂತೆ ಒಂದು ಲಕ್ಷ ಕೈ ಸಾಲ ಮಾಡಿದ್ದರು. ಸಾಲ ತೀರಿಸುವುದು ಹೇಗೆ ಎಂದು ನೊಂದು ಭಾನುವಾರ ತಮ್ಮ ತೊಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಪಟ್ಟಣದ ಸರಕಾರಿ ಕ್ರಾಫರ್ಡ್‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ