ಆ್ಯಪ್ನಗರ

ಅನಾರೋಗ್ಯದಿಂದ ಯೋಧ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ದೇವರಾಜು, ಕಾಶ್ಮೀರದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

Vijaya Karnataka Web 17 Jul 2019, 3:18 pm
ಹಾಸನ : ಕಾಶ್ಮೀರದಲ್ಲಿ ಕರ್ತವ್ಯ ನಿರತರಾಗಿದ್ದ ಇಲ್ಲಿನ ಯೋಧ ಅನಾರೋಗ್ಯದಿಂದ ಮಂಗಳವಾರ ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ದುದ್ದ ಗ್ರಾಮದ ದೇವರಾಜು (24) ಮೃತ ಯೋಧ.
Vijaya Karnataka Web SOldier


ಕಳೆದ ಎರಡು ವರ್ಷದ ಹಿಂದೆ ಭಾರತೀಯ ಸೇನೆ ಸೇರಿದ್ದ ದೇವರಾಜು, ಕಳೆದ ಎರಡು ತಿಂಗಳಿನಿಂದ ‌ಅನಾರೋಗ್ಯದಿಂದ ಬಳಲುತ್ತಿದ್ದ.

ಅನಾರೋಗ್ಯದ‌ ಹಿನ್ನಲೆಯಲ್ಲಿ ಗಡಿ ಕಾಯುವ ಕೆಲಸದಿಂದ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಕಾಶ್ಮೀರದಲ್ಲಿರುವ ಸೇನಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವರಾಜು ಅವರ ಪಾರ್ಥಿವ ಶರೀರ ನಾಳೆ (ಗುರುವಾರ) ಹುಟ್ಟೂರು ದುದ್ದ ಗ್ರಾಮಕ್ಕೆ ಆಗಮಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ