ಆ್ಯಪ್ನಗರ

ಸರಕಾರ ಐದು ವರ್ಷ ಸುಭದ್ರ: ಮೊಯ್ಲಿ ವಿಶ್ವಾಸ

ಮೊಯ್ಲಿ ವಿಶ್ವಾಸ ವಿಕ ಸುದ್ದಿಲೋಕ ಹಾಸನ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಎಚ್‌ಡಿಕುಮಾರಸ್ವಾಮಿ ಅವರಿಗೆ ಐದು ವರ್ಷ ಸಿಎಂ ಆಗಿರಿ ಎಂದು ಬೆಂಬಲ ನೀಡಿದ್ದಾರೆ...

Vijaya Karnataka 15 Sep 2018, 5:00 am
ಹಾಸನ: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಐದು ವರ್ಷ ಸಿಎಂ ಆಗಿರಿ ಎಂದು ಬೆಂಬಲ ನೀಡಿದ್ದಾರೆ. ಹೀಗಾಗಿ ಅಷ್ಟೂ ದಿನ ಸರಕಾರ ಸುಭದ್ರವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ವೀರಪ್ಪಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web hassana jds congress alliance government stay five years mp veerappa moyli
ಸರಕಾರ ಐದು ವರ್ಷ ಸುಭದ್ರ: ಮೊಯ್ಲಿ ವಿಶ್ವಾಸ


ಶ್ರವಣಬೆಳಗೊಳದಲ್ಲಿ ಈ ಶತಮಾನದ ಎರಡನೇ ಮಹಾಮಸ್ತಕಾಭಿಷೇಕ ಹಾಗೂ ಬಾಹುಬಲಿಯ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವ ಕೊನೆಯ ದಿನವಾದ ಶುಕ್ರವಾರ ಮಸ್ತಕಾಭಿಷೇಕದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

''ಯಾರೋ ಒಬ್ಬರು-ಇಬ್ಬರಿಂದ ಸರಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರಕಾರ ಆಪತ್ತಿನಲ್ಲಿದೆ ಎಂಬುದೆಲ್ಲ ಉಹಾಪೋಹ. ಸರಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಿಂದೆ ಬಿಜೆಪಿಗೆ ಶಾಪಹಾಕಿ ಹೋಗುವಾಗ ನಮ್ಮಪ್ಪನಾಣೆ ಬಿಜೆಪಿಗೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದರು. ಆದರೆ ಅವರೀಗ ಎಲ್ಲಿದ್ದಾರೆ. ಬಿ.ಎಸ್‌.ವೈ. ವಾಮಮಾರ್ಗದ ಮೂಲಕ ಸರಕಾರ ಬೀಳಿಸಲು ಯತ್ನಿಸಿದರೆ ಅವರಿಗಷ್ಟೇ ಅಲ್ಲ ಪಕ್ಷಕ್ಕೂ ಒಳ್ಳೆಯ ಹೆಸರು ಬರುವುದಿಲ್ಲ,'' ಎಂದು ಎಚ್ಚರಿಸಿದರು.

''ಕಾಂಗ್ರೆಸ್‌ ಅನ್ನು ಒಡೆಯಲು ಬ್ರಿಟಿಷರಿಗೆ ಆಗಲಿಲ್ಲ. ಇನ್ನೂ ಬಿಜೆಪಿಯಿಂದ ಆ ಕೆಲಸ ಮಾಡಲು ಸಾಧ್ಯವೇ? ಚುನಾವಣೆಯಲ್ಲಿ ಮಾತ್ರ ನೆನಪಿಸಿಕೊಳ್ಳುವ ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿದ ಕೊಡುಗೆ ಏನು. ಕೇಂದ್ರ ಸರಕಾರದಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ,'' ಎಂದು ಟೀಕಿಸಿದರು.

''ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ವಿಫಲವಾದ ಬಳಿಕ ಐಟಿ, ಸಿಬಿಐ, ಇಡಿಯನ್ನು ಅಸ್ತ್ರವಾಗಿ ಬಳಸಿಕೊಂಡು ರಾಜಕೀಯವಾಗಿ ಬಗ್ಗು ಬಡಿಯುವ ಪ್ರಯತ್ನ ನಡೆದಿದೆ. ಈ ಎಲ್ಲ ಸಂಗತಿಗಳು ರಾಜ್ಯದ ಜನತೆಗೆ ತಿಳಿದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ