ಆ್ಯಪ್ನಗರ

ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಶಿಕ್ಷೆ ಅನುಭವಿಸುತ್ತಿದ್ದಾರೆ: ರೇವಣ್ಣ

ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್‌ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ತಿಳಿಸಿದ್ದಾರೆ.

Vijaya Karnataka Web 17 Sep 2019, 10:08 pm
ಹಾಸನ: ಎಚ್‌ಡಿ ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾತಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸದರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ತಿಳಿಸಿದ್ದಾರೆ.
Vijaya Karnataka Web ಎಚ್‌ಡಿ ರೇವಣ್ಣ
ಎಚ್‌ಡಿ ರೇವಣ್ಣ


ಹಾಸನದಲ್ಲಿ ಸುದ್ದಿಗಾರರೊಂದಿಗೆ ರೇವಣ್ಣ ಮಾತನಾಡಿದರು.

ಇವೆಲ್ಲವೂ ಎಲ್ಲಿದ್ದವು, ಇವೆಲ್ಲವನ್ನೂ ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ. ಆಯ್ಯೋ ಅಂಥಾ ಬಂದರೆ ತಥಾಸ್ತು ಅಂದು ಬಿಡುತ್ತಾರೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ. ಕುಮಾರಸ್ವಾಮಿ ಇವೆಲ್ಲವನ್ನೂ ಬಿಡಬೇಕು. ಒಬ್ಬ ಅಣ್ಣನಾಗಿ ಹೇಳುತ್ತಿದ್ದೇನೆ. ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲ'' ಎಂದು ಸಲಹೆ ನೀಡಿದರು.

ದೇವೇಗೌಡರಿಗೆ ಚಾಕು ಹಾಕಿದವರಿಗೆ ಜನರೇ ಉತ್ತರ ಕೊಟ್ಟಿದ್ದಾರೆ. ಅವರನ್ನು ಡಸ್ಟ್‌ಬಿನ್‌ಗೆ ಜನರೇ ಹಾಕಿದ್ದಾರೆ. ಅವರಿಗೆಲ್ಲ ಉತ್ತರ ಕೊಡಲು ಹೋದರೆ ಪೊಳ್ಳೆದ್ದು ಹೋಗುತ್ತೇವೆ ಎಂದು ಎಚ್‌.ಡಿ.ರೇವಣ್ಣ ಹೇಳಿದರು.

''ಜೆಡಿಎಸ್‌ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ ದೇವರ ಆಶೀರ್ವಾದ ಇರೋವರೆಗೂ ಜೆಡಿಎಸ್‌ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ'' ಎಂದರು.

''ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ತನ್ನದೇ ಆದ ಅಸ್ತಿತ್ವ ಉಳಿಸಿಕೊಂಡಿದ್ದು, ದಳದಲ್ಲಿ ಢವ ಢವ, ತಳಮಳ ಇಲ್ಲ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಮುಗಿಸಲು ಒಳಸಂಚು ಮಾಡುತ್ತಿವೆ. ಏನೇ ಮಾಡಿದರೂ ಅದು ಯಶಸ್ವಿಯಾಗಲ್ಲ, ಎರಡು ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ಶಕ್ತಿ ಜೆಡಿಎಸ್‌ಗೆ ಇದೆ ಎಂದರು.

''ಅಪ್ರಚಾರಗಳಿಗೆ ಕಿವಿಗೊಡಬಾರದು. ಕೆಲವರು ಈ ಪಕ್ಷದಿಂದ ಎಲ್ಲಾಸವಲತ್ತುಗಳನ್ನು ಪಡೆದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರೇ ಮಂಗಳಾರತಿ ಎತ್ತಿದ್ದಾರೆ. ಅಂತಹವರ ಹೆಸರು ನಾನು ಹೇಳುವುದಿಲ್ಲ, ಮಂಡ್ಯದಲ್ಲಿ ಕಾಂಗ್ರೆಸ್‌-ಬಿಜೆಪಿಯವರು ಕುಮಾರಸ್ವಾಮಿ ಮಗನನ್ನು ಸೋಲಿಸಲು ಕೆಲಸ ಮಾಡಲಿಲ್ಲವೇ?'' ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಅನರ್ಹ ಶಾಸಕರು ವಿರುದ್ಧ ರೇವಣ್ಣ ಟೀಕಾಪ್ರಹಾರ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ