ಆ್ಯಪ್ನಗರ

ಹಾಸನದಲ್ಲಿ ಭೀಕರ ಅಪಘಾತ, ಕಾರು ಡಿಕ್ಕಿ ಹೊಡೆದು ಟ್ರಾಫಿಕ್ ಪೇದೆ ಸಾವು!

ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಗಾಡೇನಹಳ್ಳಿ ಸಮೀಪ ಇಂಟರ್ ಸೆಪ್ಟರ್ ನಲ್ಲಿ ಅಧಿಕಾರಿಗಳು ವಾಹನಗಳ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್‌ಕಾನ್ಸ್‌ಟೇಬಲ್ ಒಬ್ಬರಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

Vijaya Karnataka Web 3 Apr 2021, 7:50 pm
ಹಾಸನ: ಕಾರು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಕರ್ತವ್ಯ ನಿರತ ನಗರದ ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಶನಿವಾರ ಸಂಜೆ ಅಸುನೀಗಿದರು.
Vijaya Karnataka Web ರಸ್ತೆ ಅಪಘಾತ


ಮಧುಸೂದನ್(44) ಮೃತ ದುರ್ದೈವಿ. ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಗಾಡೇನಹಳ್ಳಿ ಸಮೀಪ ಇಂಟರ್ ಸೆಪ್ಟರ್ ನಲ್ಲಿ ಅಧಿಕಾರಿಗಳು ವಾಹನಗಳ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಧುಸೂದನ್‌ಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಕೂಡಲೇ ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ವಿಜಯ ನಗರ ಬಡಾವಣೆ ನಿವಾಸಿಯಾಗಿದ್ದು, ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳು ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ. ಆಸ್ಪತ್ರೆಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ