ಆ್ಯಪ್ನಗರ

ಹೇಮಾವತಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಹೆಚ್ಚವರಿ ನೀರು ಹೊರಕ್ಕೆ

ಮಳೆ ಪರಿಹಾರ ಕಾರ್ಯಾಚರಣೆಯಲ್ಲಿ ಜಿಲ್ಲೆಯ ದಂಡಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳನ್ನ ಸಲ್ಲಿಸುವೆ

Vijaya Karnataka Web 11 Aug 2019, 5:17 pm
ಹಾಸನ: ಜಿಲ್ಲೆಯ ಹೇಮಾವತಿ ಜಲಾಶಯವು ಸಂಪೂರ್ಣವಾಗಿ ಭರ್ತಿ ಯಾಗಿದ್ದು ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ, ಹಾಗೂ ಶಾಸಕರಾದ ಎಚ್.ಕೆ‌ ಕುಮಾರಸ್ವಾಮಿ ಇಂದುಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
Vijaya Karnataka Web ಹೇಮಾವತಿ
ಹೇಮಾವತಿ


ಈ ಸಂದರ್ಭದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು ನಮ್ಮ ನಿರೀಕ್ಷೆಗಿಂತಲೂ ಹೆಚ್ಚಿನ ಮಳೆಯಾಗಿದ್ದು 101967 ಕ್ಯುಸೆಕ್‌ ನೀರಿನ ಒಳಹರಿವು ಇದೆ. ಹಾಗಾಗಿ ಜಲಾಶಯಕ್ಕೆ ಮತ್ತು ಜನರಿಗೆ ತೊಂದರೆಯಾಗದಂತೆ ಹೆಚ್ಚುವರಿ ನೀರನ್ನು ಹರಿ ಬಿಡುವುದು ಎಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ತಿರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ಈಗಾಗಲೇ ಪ್ರವಾಹದಿಂದ ಹೊಳೆನರಸಿಪುರ ತಾಲೂಕಿನಲ್ಲಿ 25 ಸಾವಿರ ಎಕರೆ, ಬೇಲೂರು ತಾಲೂಕಿನಲ್ಲಿ 50 ಸಾವಿರ ಎಕರೆ ಭೂಮಿ ಹಾಳಾಗಿದೆ. ಜಿಲ್ಲೆಯಲ್ಲಿ 18 ಚಾನೆಲ್‍ಗಳು ಒಡೆದಿವೆ. ಹಳೆಕೋಟೆ ಹೋಬಳಿಯಲ್ಲಿ 98 ಮನೆಗಳು, ಚನ್ನರಾಯಪಟ್ಟಣದಲ್ಲಿ 28 ಮನೆಗಳು, ಹೊಳೆನರಸಿಪುರದಲ್ಲಿ 5 ಮತ್ತು ಗನ್ನಿಕಡದಲ್ಲಿ ಹಲವು ಮನೆಗಳು ಕುಸಿದಿವೆ. ಚನ್ನರಾಯಪಟ್ಟನದ 78 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದರು.

ಪ್ರತಿ ದಿನವು ಸಂತ್ರಸ್ತರ ಸಂಖ್ಯೆ ಹೆಚ್ಚುತ್ತಿದ್ದು ಅದಕ್ಕೆ ಅನುಗುಣವಾಗಿ ಕಾಳಜಿಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈಗಾಗಲೇ ಹೊಳೆನರಸಿಪುರದಲ್ಲಿ 1, ಸಕಲೇಶಪುರದಲ್ಲಿ 6, ಬೇಲೂರಿನಲ್ಲಿ 4 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಮತ್ತು ಜಾನುವಾರುಗಳಿಗಾಗಿ ಗೋಶಾಲೆಗಳನ್ನು ಆರಂಭಿಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದರು.

ಚೆಸ್ಕಾಂ ಅಧಿಕಾರಿಗಳಿಗೆ ಜಲಾವೃತ ಸ್ಥಳಗಳಲ್ಲಿ ವಿದ್ಯುತ್ ಕಡಿತ ಮಾಡಲು ಹೇಳಲಾಗಿದೆ. ಚನ್ನರಾಯಪಟ್ಟಣದಲ್ಲಿ ವಿದ್ಯುತ್ ಸ್ಫರ್ಶಿಸಿ ಒಬ್ಬ ವ್ಯಕ್ತಿ ಸತ್ತಿದ್ದಾರೆ. ಹಾಗಾಗಿ ಜನರಿಗೆ ವಿದ್ಯುತ್ ಅಪಾಯದ ಬಗ್ಗೆ ಜಾಗೃತರಾಗಿರಿ ಎಂದು ಹೇಳಿದರು.

ಜಿಲ್ಲೆಯ ಸಂತ್ರಸ್ತರ ತಾತ್ಕಾಲಿಕ ಪರಿಹಾರಕ್ಕಾಗಿ 5 ಕೋಟಿ ಅನುದಾನ ಬಂದಿದ್ದು ಅದು ಸಾಕಾಗುವುದಿಲ್ಲ ಹಾಗಾಗಿ ಇನ್ನೂ 10 ಕೋಟಿ ಹಣದ ಅಗತ್ಯವಿದೆ ಅದನ್ನು ಸರಕಾರ ಕೂಡಲೇ ನೀಡಬೇಕೆಂದು ಸಂಸದರು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ