ಹಾಸನ: ಸಿಎಂ ಸ್ಥಾನಕ್ಕೆ ಎಚ್.ಡಿ. ರೇವಣ್ಣ ಕೂಡ ಅರ್ಹರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಸಚಿವ ಹಾಗೂ ಸಿಎಂ ಕುಮಾರಸ್ವಾಮಿ ಸಹೋದರ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ಎಚ್.ಡಿ. ರೇವಣ್ಣ ಕೂಡ ಅರ್ಹರು ಎಂದು ಹೇಳಿರಬಹುದು. ಆದರೆ, ಈಗ ಸಿಎಂ ಸ್ಥಾನ ಖಾಲಿ ಇಲ್ಲ. ನಾವು ಅಣ್ಣ ತಮ್ಮಂದಿರು ಬಡಿದಾಡಿಕೊಳ್ಳಲ್ಲ. ನಮ್ಮ ವರಿಷ್ಠ ದೇವೇಗೌಡರು ಏನು ಹೇಳ್ತಾರೋ ನಾನು ಕೂಡ ಹಾಗೆ ಕೇಳ್ತೀನಿ ಎಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲದೆ, ಸದ್ಯ ನಾನು ಸಿಎಂ ಆಗುವ ಪ್ರಶ್ನೆಯೇ ಉದ್ಭವಿಸಲ್ಲ. ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿದ್ದರಾಮಯ್ಯರಿಗೆ ನನ್ ಮೇಲೆ ಅಭಿಮಾನವಿದೆ. ಹೀಗಾಗಿ ಈ ರೀತಿ ಹೇಳಿರಬಹುದು ಎಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ಎಚ್.ಡಿ. ರೇವಣ್ಣ ಕೂಡ ಅರ್ಹರು ಎಂದು ಹೇಳಿರಬಹುದು. ಆದರೆ, ಈಗ ಸಿಎಂ ಸ್ಥಾನ ಖಾಲಿ ಇಲ್ಲ. ನಾವು ಅಣ್ಣ ತಮ್ಮಂದಿರು ಬಡಿದಾಡಿಕೊಳ್ಳಲ್ಲ. ನಮ್ಮ ವರಿಷ್ಠ ದೇವೇಗೌಡರು ಏನು ಹೇಳ್ತಾರೋ ನಾನು ಕೂಡ ಹಾಗೆ ಕೇಳ್ತೀನಿ ಎಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲದೆ, ಸದ್ಯ ನಾನು ಸಿಎಂ ಆಗುವ ಪ್ರಶ್ನೆಯೇ ಉದ್ಭವಿಸಲ್ಲ. ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿದ್ದರಾಮಯ್ಯರಿಗೆ ನನ್ ಮೇಲೆ ಅಭಿಮಾನವಿದೆ. ಹೀಗಾಗಿ ಈ ರೀತಿ ಹೇಳಿರಬಹುದು ಎಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.