ಆ್ಯಪ್ನಗರ

ಪೌರತ್ವ ತಿದ್ದುಪಡಿ ಕಾಯ್ದೆಗೆ ಜೆಡಿಎಸ್‌ ಬೆಂಬಲ ನೀಡದು: ಎಚ್‌.ಡಿ. ರೇವಣ್ಣ

ಪೌರತ್ವ ತಿದ್ದುಪಡಿ ಕಾಯ್ದೆಗೆ ನಮ್ಮ ಪಕ್ಷದ (ಜೆಡಿಎಸ್‌) ಬೆಂಬಲವಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಘರ್ಷಗಳಿಗೆ ಅವಕಾಶ ಕಲ್ಪಿಸಬಾರದು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

Vijaya Karnataka Web 19 Dec 2019, 4:09 pm
ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆಗೆ ನಮ್ಮ ಪಕ್ಷದ (ಜೆಡಿಎಸ್‌) ಬೆಂಬಲವಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಘರ್ಷಗಳಿಗೆ ಅವಕಾಶ ಕಲ್ಪಿಸಬಾರದು. ಎಲ್ಲಾ ರಾಜ್ಯದ, ಎಲ್ಲಾ ಧರ್ಮೀಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ನಂತರ ಮಸೂದೆ ಜಾರಿ ಗೊಳಿಸಬೇಕು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.
Vijaya Karnataka Web HD Revanna


ಹಾಸನದಲ್ಲಿ ಸಿದ್ದಿಗಾರರೊಂದಿಗೆ ಮಾತನಾಡಿ, ಪೌರತ್ವ ಮಸೂದೆಯನ್ನ ತಡೆಹಿಡಿಯುವಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಅನುಸರಿಸಬೇಕು ಎಂದರು.

ನಂಬಿಹಳ್ಳಿ ಬಿಜೆಪಿ-ಜೆಡಿಎಸ್ ಮಾರಾಮಾರಿ ಹಿನ್ನಲೆ:
ಉದ್ದೇಶಪೂರ್ವಕವಾಗಿ ಜೆಡಿಎಸ್ ಬೆಂಬಲಿಗರನ್ನ ಮಾತ್ರ ಬಂಧಿಸಲಾಗಿದೆ. ಪೊಲೀಸರ ಈ ಕ್ರಮವನ್ನು ವಿರೋಧಿಸಿ 144ಸೆಕ್ಷನ್ ಮುಗಿದ ಕೂಡಲೇ ಪ್ರತಿಭಟನೆ ಮಾಡುತ್ತೇವೆ. ಈ ಬಗ್ಗೆ ಪಕ್ಷದ ಮುಖಂಡರೊಟ್ಟಿಗೆ ಚರ್ಚಿಸಿ ತೀರ್ಮಾನ‌ ಕೈಗೊಳ್ಳಲಾಗಿದೆ. ಅಗತ್ಯಬಿದ್ದರೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೂ ಭಾಗಿಯಾಗುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆ: ವಿವಿಧ ಜಿಲ್ಲೆಗಳ 'ಚಿತ್ರ'ಣ

ನನ್ನನ್ಜು ಯರೂ ಟಾರ್ಗೆಟ್ ಮಾಡಲಾಗಲ್ಲ. ಇಂತಹವೆಲ್ಲವನ್ನ ನೋಡಿಯೇ ರಾಜಕೀಯದಲ್ಲಿದ್ದೇನೆ. ಜೆಡಿಎಸ್, ದೇವೇಗೌಡರ ಕುಟುಂಬವನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಜಿಲ್ಲೆಯ ಅಧಿಕಾರಿಗಳು ಕಾನೂನು ಮೀರಿ ಕೆಲಸ ಮಾಡಬಾರದು. ಹಾಗೇನಾದ್ರು ಮಾಡಿದ್ರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಡಿಸಿ, ಎಸ್ಪಿ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಜಾಗೃತರಾಗಿರಬೇಕು. ಒಂದು ಪಕ್ಷದ ಏಜೆಂಟರಂತೆ‌ ಎಸ್ಪಿ-ಡಿಸಿ ವರ್ತಿಸಬಾರದು ಎಂದು ಹೇಳುವ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾಹಿತಿ ಬಹಿರಂಗ ಪಡಿಸುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ