ಆ್ಯಪ್ನಗರ

ಆಡಿಯೋ ವಿವಾದ: ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವೆಂದ ದೇವೇಗೌಡ

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ವಿವಾದ ಭಾರೀ ಸದ್ದು ಮಾಡುತ್ತಿದ್ದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 3 Nov 2019, 2:37 pm
ಹಾಸನ: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿರುವುದೇ ಕೆಟ್ಟ ನಡವಳಿಕೆಯಿಂದ. ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪು ನೋಡಿ ಮುಂದಿನ ನಿರ್ಧಾರ ಮಾಡಲಾಗುವುದು ಎಂದರು.
Vijaya Karnataka Web hd devegwoda


ಆಡಿಯೋ ವಿವಾದ: ಶಾ ರಾಜೀನಾಮೆ ಒತ್ತಾಯ ಮೂರ್ಖತನವೆಂದ ಬಿಎಸ್‌ವೈ

ಸಿಎಂ ಬಿಎಸ್‌ವೈ ಅನರ್ಹ ಶಾಸಕರ ಕುರಿತಾದ ಆಡಿಯೋ ವಿರುದ್ಧ ಕಾಂಗ್ರೆಸ್ ನವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ ಅವರಿಗೂ ದೂರು‌ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿಯ ಈ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾದದ್ದು ಎಂದು ಕಿಡಿಕಾರಿದರು.

ಬಿಎಸ್‌ವೈ ಆಡಿಯೋ ವಿವಾದ: ಸಿಬಿಐ ತನಿಖೆಗೆ ಯುಟಿ ಖಾದರ್ ಒತ್ತಾಯ

ಸಿಎಂ ಬಿಎಸ್‌ವೈ ಆಡಿಯೋದಲ್ಲಿ ಉಲ್ಲೇಖವಾಗಿರುವ ವಿಚಾರ, ಪ್ರಧಾನಿ ನರೇಂದ್ರ ಮೋದಿಗೆ ಸೇರಿ ಎಲ್ಲರಿಗೂ ತಿಳಿದಿದೆ. ಕೇಂದ್ರ ಸರಕಾರ ಉತ್ತರಾಂಚಲದಲ್ಲಿ ಸಿಎಂ ಮೇಲೆ ಸಿಬಿಐ ಕೇಸ್ ದಾಖಲಿಸಿದೆ.ಅದೇ ಮಾನದಂಡವನ್ನು ಯಡಿಯೂರಪ್ಪಗೂ ಅನ್ವಯ ಮಾಡಬೇಕು ಅಲ್ವಾ ಎಂದು ಪ್ರಶ್ನಿಸಿದ ಅವರು ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ? ಇಲ್ಲಿ ಏನು ಮಾಡುತ್ತಾರೋ ನೋಡೋಣ ಎಂದರು.

ವಿಶ್ವಾಸದ್ರೋಹಿಗಳಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಎಂಟಿಬಿ ನಾಗರಾಜ್‌ ವಿರುದ್ಧ ಕೃಷ್ಣಬೈರೇಗೌಡ ವಾಗ್ದಾಳಿ

ಅನರ್ಹ ಶಾಸಕರ ಕುರಿತಾಗಿ ಬಿಜೆಪಿ ಕೆಲವು ಮುಖಂಡರ ನಿಲುವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿಎಸ್‌ವೈ ಅಸಮಾಧಾನವನ್ನು ಹೊರಹಾಕಿದ್ದರು. ಅನರ್ಹ ಶಾಸಕರ ಬಗ್ಗೆ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಆಪರೇಷನ್ ಕಮಲದ ಸಂದರ್ಭದಲ್ಲಿ ಅಮಿತ್ ಶಾ ಪಾತ್ರದ ಕುರಿತಾಗಿಯೂ ಆಡಿಯೋದಲ್ಲಿ ಉಲ್ಲೇಖಗೊಂಡಿತ್ತು. ಈ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈಗಾಗಲೇ ಆಡಿಯೋ ವಿರುದ್ಧ ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು ಸಿಎಂ ಬಿಎಸ್‌ವೈ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೂ ಕಾಂಗ್ರೆಸ್ ಕರೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ