ಆ್ಯಪ್ನಗರ

ಸಿದ್ದರಾಮಯ್ಯ ಸಿಎಂ ಆದ್ರೆ ನಾನೇನು ಬೇಡ ಅನ್ನಲ್ಲ - ರೇವಣ್ಣ ಸಿದ್ದು ಪ್ರೀತಿ !

ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ನನ್ನ ಅಭ್ಯಂತರ ಇಲ್ಲ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಈ ರೀತಿಯ ಹೇಳಿಕೆ ನೀಡಿದ್ದಾರೆ. ರೇವಣ್ಣ ಸಿದ್ದು ಮೇಲಿನ ಪ್ರೀತಿ ಕುತೂಹಲಕ್ಕೆ ಕಾರಣವಾಗಿದೆ.

Vijaya Karnataka Web 17 Sep 2019, 2:38 pm
ಹಾಸನ: ಸಿದ್ದರಾಮಯ್ಯ ಸಿಎಂ ಆದರೆ ನಾವೇನು ಬೇಡ ಅನ್ನೊದಿಲ್ಲ. ದೇವರು ಆಶೀರ್ವಾದ ಮಾಡಿದ್ರೆ ಸಿಎಂ ಆಗಲಿ, ಒಳ್ಳೆಯದು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ದೇವೇಗೌಡರ ಬೀಗರು ಹಾಗೂ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್ ರಂಗಪ್ಪ ಅವರು ಸಿದ್ದರಾಮಯ್ಯ ಯಾಕೆ ಮತ್ತೆ ಸಿಎಂ ಆಗಬಾರದು ಎಂಬ ಹೇಳಿಕೆಗೆ ರೇವಣ್ಣ ನೀಡಿರುವ ಪ್ರತಿಕ್ರಿಯೆ ಕುತೂಹಲಕ್ಕೆ ಕಾರಣವಾಗಿದೆ.
Vijaya Karnataka Web h d revanna


ಕೆ.ಎಸ್ ರಂಗಪ್ಪ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ ಕೆಲ ಹೊತ್ತು ಚರ್ಚಿಸಿದ್ದರು. ಈ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಂಗಪ್ಪ ಸ್ಪರ್ಥಿಸಿ ಸೋತಿದ್ದರು. ಬಳಿಕ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು.

ಕಲಬುರಗಿಯಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ: ಯಡಿಯೂರಪ್ಪ ಘೋಷಣೆ

ರಂಗಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯ ಕುರಿತಾಗಿ ಪ್ರತಿಕ್ರಿಯಿಸಿರುವ ರೇವಣ್ಣ, ಸಿದ್ದರಾಮಯ್ಯ ಕೆ.ಎಸ್ ರಂಗಪ್ಪ ಅವರ ಮನೆಗೆ ತಿಂಡಿ ತಿನ್ನಲು ಹೋಗಿದ್ದರು. ನಾನು ಸಿದ್ದರಾಮಯ್ಯ ಅವರ ಮನೆಗೆ ಹೋಗುತ್ತೇನೆ. ಸಿದ್ದರಾಮಯ್ಯ ನಮ್ಮ ಮನೆಗೆ ಬರ್ತಾರೆ ಹಾಗಂತ ಅವರು ಜೆಡಿಎಸ್ ಗೆ ಬರ್ತಾರೆ ಅಂತಾನಾ ಎಂದು ಪ್ರಶ್ನಿಸಿದರು.

ದಲಿತ ಸಂಸದರಿಗೆ ಹಟ್ಟಿ ಪ್ರವೇಶ ನಿರಾಕರಣೆ - ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಇದೇ ವೇಳೆ ಜೆಡಿಎಸ್ ಪಕ್ಷದಿಂದ ಬಿಟ್ಟು ಹೋದ ಶಾಸಕರ ವಿರುದ್ಧ ಗರಂ ಆದ ರೇವಣ್ಣ, ಕೆಲವರು ದೇವೇಗೌಡರಿಗೆ ಚೂರಿ ಹಾಕಿ ಹೋಗಿದ್ರು ಅವರನ್ನೆಲ್ಲಾ ಈಗ ಜನ ಕಸದ ಬುಟ್ಟಿಗೆ ಹಾಕಿದ್ದಾರೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ದೇವೇಗೌಡರು ಇದನ್ನೆಲ್ಲಾ ಸಾಕಷ್ಟು ನೋಡಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ