ಆ್ಯಪ್ನಗರ

ಮಂಗಳೂರಿನಲ್ಲಿ ಸಜೀವ ಬಾಂಬ್‌ ಪತ್ತೆ: ರಾಜ್ಯಕ್ಕೆ ಉಗ್ರ ನಿಗ್ರಹ ಪಡೆ ಅಗತ್ಯ ಇದೆ ಎಂದ ಸಂಸದ ಪ್ರಜ್ವಲ್‌ ರೇವಣ್ಣ

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಪ್ರಕರಣ ಸಂಬಂಧ ರಾಜ್ಯದೆಲ್ಲೆಡೆ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಭಯೋತ್ಪಾದನೆ ನಿಗ್ರಹ ದಳ ಅವಶ್ಯಕತೆ ಇದೆ ಎಂದು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಆಗ್ರಹಿಸಿದರು.

Vijaya Karnataka Web 20 Jan 2020, 7:14 pm
ಹಾಸನ: ಮಂಗಳೂರಿನಲ್ಲಿಸಜೀವ ಬಾಂಬ್‌ ಪತ್ತೆ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ರಾಜ್ಯಕ್ಕೊಂದು ಪ್ರತ್ಯೇಕ ಉಗ್ರ ನಿಗ್ರಹ ಪಡೆ ಬೇಕಾಗಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಪ್ರತಿಕ್ರಿಯಿಸಿದರು.
Vijaya Karnataka Web ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಈ ಹಿಂದೆಯೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯಕ್ಕೆ ಪ್ರತ್ಯೇಕ ಪಡೆ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ್ದರು ಎಂದರು.

ಹೊಸದಿಲ್ಲಿಯಲ್ಲಿ ಮಾತ್ರ ಉಗ್ರ ನಿಗ್ರಹ ಪಡೆ ಇದೆ. ದುರ್ಘಟನೆ ಸಂದರ್ಭ ನಿಗ್ರಹ ಅಲ್ಲಿಂದ ಹೊರಟು ಬರಲು 8 ಗಂಟೆ ಸಮಯ ಬೇಕಾಗುತ್ತದೆ. ಈಗಿನ ಬೆಳವಣಿಗೆ ಪ್ರಕಾರ ರಾಜ್ಯಕ್ಕೊಂದು ಪ್ರತ್ಯೇಕ ಉಗ್ರ ನಿಗ್ರಹ ಪಡೆ ಸನ್ನದ್ಧವಾಗಿರಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಗುಪ್ತಚರ ಇಲಾಖೆ ಇನ್ನಷ್ಟು ಉತ್ತಮಗೊಳ್ಳಬೇಕು. ರಾಜ್ಯಕ್ಕೆ ಪ್ರತ್ಯೇಕ ಉಗ್ರ ನಿಗ್ರಹ ಪಡೆ ಬಗ್ಗೆ ನಾನು ಸಂಸತ್‌ ನಲ್ಲೂಪ್ರಸ್ತಾಪ ಮಾಡುವೆ. ಈ ಕೃತ್ಯ ಯಾರೇ ಮಾಡಿದ್ರು ಅವರನ್ನು ಕೂಡಲೇ ಪತ್ತೆ ಹಚ್ಚಬೇಕು. ಆಯಕಟ್ಟಿನ ಜಾಗದಲ್ಲಿಭದ್ರತೆಯನ್ನ ಇನ್ನಷ್ಟು ಬಿಗಿ ಮಾಡಬೇಕು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ