ಆ್ಯಪ್ನಗರ

ಹಾಸನ: ಕೆಇಬಿ ನೌಕರನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು, ಪಾರ್ಟಿ ನಡೆದ ಸ್ಥಳದಲ್ಲೇ ಹತ್ಯೆ!

​ರಾತ್ರಿ ವೇಳೆ ಸಂತೋಷ್‌ ಹಾಗೂ ಕೊಲೆ ಮಾಡಿ ಹೋಗಿರುವ ದುಷ್ಕರ್ಮಿಗಳು ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದಾರೆ. ಯಾಕೆಂದರೆ ಮೃತದೇಹದ ಬಳಿ ಮದ್ಯದ ಬಾಟಲ್‌ ಹಾಗೂ ಊಟದ ಪ್ಯಾಕ್‌ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka Web 16 Jan 2021, 1:19 pm
ಹಾಸನ: ಕೆಇಬಿ ನೌಕರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ. ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿ. ಹೂವಿನಹಳ್ಳಿ ಕಾವಲು ಬಳಿ ಹೊಲದಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದ್ದು, ಬೆಳ್ಳಂಬೆಳಗ್ಗೆಯೇ ಈ ಭಾಗದ ಜನರು ಬೆಚ್ಚಿಬೀಳುವಂತೆ ಆಗಿದೆ.
Vijaya Karnataka Web KEB Officer


ರಾತ್ರಿ ವೇಳೆ ಸಂತೋಷ್‌ ಹಾಗೂ ಕೊಲೆ ಮಾಡಿ ಹೋಗಿರುವ ದುಷ್ಕರ್ಮಿಗಳು ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದಾರೆ. ಯಾಕೆಂದರೆ ಮೃತದೇಹದ ಬಳಿ ಮದ್ಯದ ಬಾಟಲ್‌ ಹಾಗೂ ಊಟದ ಪ್ಯಾಕ್‌ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾರ್ಟಿ ವೇಳೆ ಗಲಾಟೆ ನಡೆದು ಇದು ಕೊಲೆಯಲ್ಲಿ ಅಂತ್ಯವಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಲೂರು: ಶಾಲೆ ಬಾಗಿಲು ಮುರಿದು ಕುಡಿದು ನಿದ್ರಿಸಿದವ ಈಗ ಪೊಲೀಸರ ಅತಿಥಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ