ಆ್ಯಪ್ನಗರ

ಕೇರಳಾಪುರ: ಗೌಡರ ಕುಟುಂಬದ್ದು ಮೊಸಳೆ ಕಣ್ಣೀರು

ಕೇರಳಾಪುರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತು ಕುಟುಂಬದವರು ಇತರರು ಬೆಳೆಯದಂತೆ ಷಡ್ಯಂತ್ರ ಮಾಡುತ್ತಿದ್ದಾರೆ. ಚುನಾವಣೆ ವೇಳೆ ಮೊಸಳೆ ಕಣ್ಣೀರು ಸುರಿಸುವುದು ಮಾಮೂಲಿ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ವ್ಯಂಗ್ಯವಾಡಿದರು.

Vijaya Karnataka 16 Apr 2019, 5:00 am
ಕೇರಳಾಪುರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತು ಕುಟುಂಬದವರು ಇತರರು ಬೆಳೆಯದಂತೆ ಷಡ್ಯಂತ್ರ ಮಾಡುತ್ತಿದ್ದಾರೆ. ಚುನಾವಣೆ ವೇಳೆ ಮೊಸಳೆ ಕಣ್ಣೀರು ಸುರಿಸುವುದು ಮಾಮೂಲಿ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ವ್ಯಂಗ್ಯವಾಡಿದರು.
Vijaya Karnataka Web keralapura lokasabha election a manju allegation devegowda
ಕೇರಳಾಪುರ: ಗೌಡರ ಕುಟುಂಬದ್ದು ಮೊಸಳೆ ಕಣ್ಣೀರು


ಬಸವಾಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ.ಅಂಬೇಡ್ಕರ್‌ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಮಾತಯಾಚಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ರಾಜಕಾರಣ ಹಾಗೂ ಪಕ್ಷದ ದೃಷ್ಟಿಯಿಂದ ಸ್ಪರ್ಧಿಸಿದ್ದೇನೆ. ಸೈನ್ಯಕ್ಕೆ ಸೇರುವವರು ಅನ್ನಕ್ಕೆ ಗತಿ ಇಲ್ಲದವರು ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಲೇ ದೇಶದ ಕ್ಷ ಮೆಯಾಚಿಸಬೇಕು. ಸೋಲಿನ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ 70 ಮಂದಿ ಬಿಜೆಪಿ ಬೆಂಬಲಿಸುತ್ತಿದ್ದಾರೆ. ಮೋದಿ ಅವರ ಪ್ರೇರಣೆ, ಅಭಿವೃದ್ಧಿ ಪರಚಿಂತನೆ ಮೆಚ್ಚಿ ಪಕ್ಷ ಸೇರಿದ್ದೇನೆ. ದೇಶದಲ್ಲೇ 360ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡುವುದಾಗಿ ನಂಬಿಸಿ ಯಾವುದೇ ಸಾಲ ಮನ್ನಾ ಮಾಡಿಲ್ಲ ಎಂದು ಹೇಳಿದರು.

ಬಸವಾಪಟ್ಟಣ ಗ್ರಾಮದಿಂದ ಕಾಳೇನಹಳ್ಳಿ ಮತ್ತು ಕೇರಳಾಪುರ ಗ್ರಾಮದವರೆಗೆ ಕಾರ‍್ಯಕರ್ತರು ಬೈಕ್‌ ರಾರ‍ಯಲಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ