ಆ್ಯಪ್ನಗರ

ಸಡಗರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಉಡುಸಲಮ್ಮ ಜಾತ್ರೆಯಲ್ಲಿ ಕೊಂಡೋತ್ಸವ

Vijaya Karnataka 17 Mar 2019, 5:00 am
ಕೇರಳಾಪುರ: ಕೇರಳಾಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಶನಿವಾರ ಸಡಗರದಿಂದ ನಡೆಯಿತು.
Vijaya Karnataka Web keralapura veerabhdreswara temple fair festival
ಸಡಗರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ


ಬೆಳಗ್ಗೆ ದೇವಾಲಯದಲ್ಲಿ ಗಣಪತಿ, ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ, ನವಗ್ರಹ ಪೂಜೆ ಸಲ್ಲಿಸಲಾಯಿತು. ಮೂಲ ದೇವರಿಗೆ ವಿಶೇಷ ಪೂಜೆ, ಯಾತ್ರಾದಾನೋತ್ಸವ ಸೇವೆ ಪೂರೈಸಲಾಯಿತು. ಬಳಿಕ ದೇವರ ಉತ್ಸವ ಮೂರ್ತಿಯನ್ನು ಹೊರತಂದು ಪ್ರದಕ್ಷಿಣೆ ಹಾಕಿದ ಬಳಿಕ ದೇವಸ್ಥಾನ ಎದುರಿದ್ದ ಅಲಂಕೃತ ರಥದ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ನಂತರ ಭಕ್ತರು ಹರ್ಷೋದ್ಘಾರದಿಂದ ತೇರು ಎಳೆದರು.

ರಥ ಬೀದಿಯಲ್ಲಿ ತೇರು ಮುಂದೆ ಚಲಿಸುವಾಗಿ ಭಕ್ತರು ಹಣ್ಣು ಧವನ ಎಸೆದರು. ಮೈಲಾರ ಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿದ ತೇರನ್ನು ಸಂಜೆ ಪೂಜೆ ಸಲ್ಲಿಸಿ ವಾಪಸ್‌ ಸ್ವ ಸ್ಥಳಕ್ಕೆ ತಂದು ನಿಲ್ಲಿಸಲಾಯಿತು. ಸುತ್ತಲ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದಲ್ಲಿ ಮೂರ್ತಿಯನ್ನು ಬಗೆ ಬಗೆಯ ಹೂಗಳಿಂದ ಸಿಂಗರಿಸಲಾಗಿತ್ತು.

ತಹಸೀಲ್ದಾರ್‌ ಶಿವರಾಜ್‌, ಕೊಣನೂರು ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಸಾಗರ್‌ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿತ್ತು. ಜಾನುವಾರುಗಳನ್ನು ಕಟ್ಟಿದ್ದು ರಥೋತ್ಸವಕ್ಕೆ ಮತ್ತಷ್ಟು ಮೆರಗು ನೀಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ