ಆ್ಯಪ್ನಗರ

ಹೊನಗಾನಹಳ್ಳಿ: ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಚಾಲನೆ

ಕೊಣನೂರು: ಅಂತರ್ಜಲ ಪ್ರಮಾಣವನ್ನು ಹೆಚ್ಚಿಸುವಲ್ಲಿ ಚೆಕ್‌ ಡ್ಯಾಂ ಗಳು ಪ್ರಮುಖ ಪಾತ್ರವಹಿಸುತ್ತವೆ. ಈ ನಿಟ್ಟಿನಲ್ಲಿ ಇಂದು ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.

Vijaya Karnataka 28 Jan 2019, 5:00 am
ಕೊಣನೂರು: ಅಂತರ್ಜಲ ಪ್ರಮಾಣವನ್ನು ಹೆಚ್ಚಿಸುವಲ್ಲಿ ಚೆಕ್‌ ಡ್ಯಾಂ ಗಳು ಪ್ರಮುಖ ಪಾತ್ರವಹಿಸುತ್ತವೆ. ಈ ನಿಟ್ಟಿನಲ್ಲಿ ಇಂದು ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.
Vijaya Karnataka Web konnanuru laying foundayion check dam
ಹೊನಗಾನಹಳ್ಳಿ: ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಚಾಲನೆ


ಹೋಬಳಿಯ ಹೊನಗಾನಹಳ್ಳಿ ಸಮೀಪದಲ್ಲಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಮಳೆ ಬಿದ್ದಾಗ ಹಳ್ಳಕೊಳ್ಳದಲ್ಲಿ ಹರಿದು ವ್ಯರ್ಥವಾಗುವ ನೀರನ್ನು ಸಧ್ಬಳಕೆ ಮಾಡಿಕೊಳ್ಳಲು ಚೆಕ್‌ ಡ್ಯಾಂ ಅವಶ್ಯಕ. ಮಳೆಯಾಶ್ರಿತ ಜಮೀನುಗಳಲ್ಲಿ ವ್ಯವಸಾಯಕ್ಕಾಗಿ ಕೊಳವೆ ಬಾವಿಗಳನ್ನು ಆಶ್ರಯಿಸಬೇಕಾಗಿದ್ದು ಅಂತರ್ಜಲ ಮಟ್ಟವು ಕಡಿಮೆಯಾಗಿ ಬೋರ್‌ ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಚೆಕ್‌ ಡ್ಯಾಂಗಳನ್ನು ನಿರ್ಮಿಸಿ ನೀರು ಸಂಗ್ರಹವಾಗುವಂತೆ ಮಾಡಿದ್ದಲ್ಲಿ ಸುತ್ತಮುತ್ತಲ ಭಾಗಗಳಲ್ಲಿ ಅಂತರ್ಜಲದ ಪ್ರಮಾಣ ಹೆಚ್ಚಿ ಬೋರ್‌ವೆಲ್‌ಗಳು ಪುನಶ್ಚೇತನಗೊಳಿಸಲು ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಹೊನಗಾನಹಳ್ಳಿ, ತರಗಳಲೆ ಮತ್ತು ಅಬ್ಬೂರು ಬಳಿ 2 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 3 ಚೆಕ್‌ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಮುಂಗಾರು ಆರಂಭವಾಗುವುದಕ್ಕೆ ಮುನ್ನವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ತರಗಳಲೆ ಕೆರೆಯಿಂದ ಕಾರ್ಗಲ್‌ ಕೆರೆಗೆ ನೀರು ಹರಿಯುವ ಕಾಲುವೆಯ ದುರಸ್ತಿಗಾಗಿ ಯೋಜನೆ ರೂಪಿಸಿ ಎಂದು ಹೇಳಿದರು.

ಇದಕ್ಕೂ ಮುಂಚೆ 25 ಲಕ್ಷ ವೆಚ್ಚದಲ್ಲಿ ಮಲ್ಲಿಪಟ್ಟಣ ಹೋಬಳಿಯ ಚಿಕ್ಕಬೆಮ್ಮತ್ತಿ ಕೆರೆಯಿಂದ ನಿಲಕುಂದ ಮಾರ್ಗವಾಗಿ ಹಡ್ರಂಗಿ ಕೆರೆಗೆ ನೀರು ಹರಿಯುವ ಕಾಲುವೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ತಾಪಂ ಸದಸ್ಯ ಸೂರೇಗೌಡ, ಎಪಿಎಂಸಿ ಅಧ್ಯಕ್ಷ ಹೊನ್ನರಸೇಗೌಡ, ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಸದಸ್ಯ ಸೋಮಾಚಾರಿ, ಗ್ರಾಪಂ ಸದಸ್ಯರು, ಮುಖಂಡರಾದ ಬೊಮ್ಮನಹಳ್ಳಿ ಮಾಳಪ್ಪ, ಹೊನಗಾನಹಳ್ಳಿ ಶ್ರೀನಾಥ್‌, ಚಂದ್ರೇಗೌಡ, ವೀಣಾ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ