ಆ್ಯಪ್ನಗರ

ಬೇಲೂರು: ಶಾಲೆ ಬಾಗಿಲು ಮುರಿದು ಕುಡಿದು ನಿದ್ರಿಸಿದವ ಈಗ ಪೊಲೀಸರ ಅತಿಥಿ

ಕಾಲೇಜು ತುಂಬಾ ಹಳೆಯದಾಗಿದೆ. ಇಲ್ಲಿ ಗ್ರಾಮೀಣ ಹಾಗೂ ಪಟ್ಟಣದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಾರೆ. ಆದರೆ ಕಾಲೇಜಿಗೆ ಕಾವಲುಗಾರರು ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ರಾತ್ರಿ ವೇಳೆ ಸೂಕ್ತ ಭದ್ರತೆಯಿಲ್ಲ.

Vijaya Karnataka Web 15 Jan 2021, 8:58 pm
ಬೇಲೂರು: ಯುವಕನೊಬ್ಬ ಪಟ್ಟಣದ ಜೂನಿಯರ್‌ ಕಾಲೇಜು ಕಾಂಪೌಂಡ್‌ ಹಾರಿ ಕೊಠಡಿ ಬಾಗಿಲು ಮುರಿದು ಒಳನುಗ್ಗಿ ಅಲ್ಲಿಯೇ ಮದ್ಯ ಸೇವಿಸಿ ನಿದ್ರೆಗೆ ಜಾರಿದ್ದು, ಬೆಳಗ್ಗೆ ಪೊಲೀಸರ ಅತಿಥಿಯಾಗಿದ್ದಾನೆ.
Vijaya Karnataka Web ಪೊಲೀಸ್
ಪೊಲೀಸ್


ಶುಕ್ರವಾರ ಬೆಳಗ್ಗೆ ಎಂದಿನಂತೆ ಶಾಲೆ ಬಾಗಿಲು ತೆರೆದ ಸಂದರ್ಭ ಸಿಬ್ಬಂದಿಗೆ ಕೊಠಡಿ ಬಾಗಿಲು ಮುರಿದಿರುವುದು ಕಂಡು ಬಂದ ಹಿನ್ನಲೆಯಲ್ಲಿ ಒಳ ಹೋಗಿ ನೋಡಿದಾಗ ಯುವಕ ಕಂಠಪೂರ್ತಿ ಕುಡಿದು ಮಲಗಿರುವುದು ಕಂಡುಬಂದಿದೆ.

ವಿದ್ಯಾರ್ಥಿಗಳು ಕುಳಿತುಕೊಳ್ಳುವ ಡೆಸ್ಕ್‌ ಮೇಲೆ ಮಲಗಿದ್ದ ಆತ ತಂದಿದ್ದ ತಿಂಡಿ ಹಾಗೂ ಮದ್ಯದ ಬಾಟಲ್‌ ಅನ್ನು ಕಂಡ ಸಿಬ್ಬಂದಿ ಪ್ರಾಂಶುಪಾಲರಿಗೆ ತಿಳಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೂಕ್ತ ಭದ್ರತೆಗೆ ಮನವಿ: ಪ್ರಾಂಶುಪಾಲ ಗೋಪಾಲ್‌ ಹಾಗೂ ಉಪ ಪ್ರಾಂಶುಪಾಲ ಚಂದ್ರಶೇಖರಪ್ಪ ಮಾತನಾಡಿ, ''ಕಾಲೇಜು ತುಂಬಾ ಹಳೆಯದಾಗಿದೆ. ಇಲ್ಲಿ ಗ್ರಾಮೀಣ ಹಾಗೂ ಪಟ್ಟಣದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಾರೆ. ಆದರೆ ಕಾಲೇಜಿಗೆ ಕಾವಲುಗಾರರು ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ರಾತ್ರಿ ವೇಳೆ ಸೂಕ್ತ ಭದ್ರತೆಯಿಲ್ಲ. ಈ ಸಂಬಂಧ ಹಲವಾರು ಬಾರಿ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಾತ್ರಿ ವೇಳೆ ಕಾಲೇಜು ಸುತ್ತಮುತ್ತ ಕುಡುಕರ ಹಾವಳಿ ಹೆಚ್ಚಾಗಿದೆ. ಭದ್ರತಾ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಬೇಕು'' ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ