ಆ್ಯಪ್ನಗರ

ಪ್ರವಾಹ ಪೀಡಿತವಾಗಿದ್ದ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಸಚಿವ ಸೂಚನೆ

ಪ್ರವಾಹ ಪೀಡಿತ ಸ್ಥಳಗಳಲ್ಲಿ ನೆರೆ ಇಳಿದ ನಂತರ ರೋಗ ರುಜಿನಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಬ್ಲೀಚಿಂಗ್‌ ಪೌಡರ್‌ ಹಾಕಿ ಸ್ವಚ್ಛತೆ ಕಾಪಾಡಬೇಕು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ಸೂಚನೆ ನೀಡಿದರು.

Vijaya Karnataka 22 Aug 2018, 5:00 am
ಕೊಣನೂರು: ಪ್ರವಾಹ ಪೀಡಿತ ಸ್ಥಳಗಳಲ್ಲಿ ನೆರೆ ಇಳಿದ ನಂತರ ರೋಗ ರುಜಿನಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಬ್ಲೀಚಿಂಗ್‌ ಪೌಡರ್‌ ಹಾಕಿ ಸ್ವಚ್ಛತೆ ಕಾಪಾಡಬೇಕು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ಸೂಚನೆ ನೀಡಿದರು.
Vijaya Karnataka Web HSN-HSN21KNR2


ಪ್ರವಾಹ ಪೀಡಿತ ಕೊಡಗಿಗೆ ಭೇಟಿ ನೀಡಿ ವಾಪಾಸಾಗುವ ವೇಳೆ ನೆರಪೀಡಿತ ರಾಮನಾಥಪುರದ ನಿರಾಶ್ರಿತರ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹದಿಂದ ನಿರಾಶ್ರಿತರಾಗಿರುವವರ ಆರೋಗ್ಯದ ದೃಷ್ಟಿಯಿಂದ ಹಲವು ಕ್ರಮ ಕೈಗೊಳ್ಳಲಾಗಿದ್ದು, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರಕಾರದೊಂದಿಗೆ ಶೀಘ್ರ ಚರ್ಚಿಸುವುದಾಗಿ ತಿಳಿಸಿದರು.

ಬಳಿಕ ಸಂತ್ರಸ್ತರ ಅಳಲನ್ನು ಆಲಿಸಿ, ರಾಮನಾಥಪುರದಲ್ಲಿ ಸುಮಾರು 218 ಮನೆ ಪ್ರವಾಹದಿಂದ ಜಲಾವೃತಗೊಂಡಿದ್ದು, ಅವರೆಲ್ಲರಿಗೂ ತಾತ್ಕಾಲಿಕ ವಸತಿ, ಊಟೋಪಚಾರಗಳನ್ನು ತಾಲೂಕು ಆಡಳಿತದಿಂದ ಮಾಡಲಾಗಿದೆ. ನಮ್ಮ ಆರೋಗ್ಯ ಇಲಾಖೆ ವತಿಯಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆಯಾಗಿ ಬ್ಲೀಚಿಂಗ್‌ ಪೌಡರ್‌ ಹಾಕಿ ಸ್ವಚ್ಛಗೊಳಿಸಲಾಗಿದೆ. ಅಲ್ಲಿನ ಜನರಿಗೆ ಸ್ವಚ್ಛತೆಯ ಬಗ್ಗೆ ತಿಳಿವಳಿಕೆ ನೀಡಲಾಗಿದೆ, ಅಲ್ಲಿನ ಜನತೆಗೆ ಶುದ್ಧ ಕುಡಿಯುವ ನೀರು ನೀಡಲಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳ ನೀರನ್ನು ಪರೀಕ್ಷಿಸಲಾಗಿದ್ದು, ಆ.15 ರಿಂದ 21 ರ ವರೆಗೆ 278 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದರು.

ತಹಸೀಲ್ದಾರ್‌ ನಂದೀಶ್‌ ಮಾತನಾಡಿ, ಈಗಾಗಲೇ ನಿರಾಶ್ರಿತರಿಗೆ 6 ಎಕರೆ ಜಮೀನು ಗುರುತಿಸಲಾಗಿದ್ದು, ಅಲ್ಲಿ ವಸತಿ ರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಪೂರ್ಣ ಮನೆಕಳೆದುಕೊಂಡವರಿಗೆ ಮೊದಲ ಆಧ್ಯತೆ ನೀಡಲಾಗುವುದು ಎಂದು ಸಚಿವರ ಗಮನಕ್ಕೆ ತಂದರು.

ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಇಲ್ಲಿನ ವೈದ್ಯರೊಂದಿಗೆ ಆಸ್ಪತ್ರೆಯ ಆಗುಹೋಗುಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಇಲ್ಲಿನ ಆಸ್ಪತ್ರೆಗೆ ಹೆಚ್ಚಿನ ವೈದ್ಯರು ಬೇಕು, ಆಂಬ್ಯುæನ್ಸ್‌ ಅಗತ್ಯವಿದ್ದು, ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಕಾಯಂ ಮಾಡಿಕೊಡಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿ,

ಟಿಎಚ್‌ಒ ಹಾಗೂ ಡಿಎಚ್‌ಒ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್‌, ತಾಲೂಕು ಆರೋಗ್ಯಾಧಿಕಾರಿ ಸ್ವಾಮಿಗೌಡ, ಜಿ.ಪಂ ಸದಸ್ಯ ರೇವಣ್ಣ, ತಾ.ಪಂ. ಉಪಾಧ್ಯಕ್ಷ ನಾಗರಾಜ್‌, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪೂಜ್ಯ ಪ್ರದೀಪ್‌, ಡಾ. ಪ್ರದೀಪ್‌, ಆರೋಗ್ಯ ನಿರೀಕ್ಷ ಕ ಆನಂದಗೌಡ, ತಹಸೀಲ್ದಾರ್‌ ನಂದೀಶ್‌, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ