ಆ್ಯಪ್ನಗರ

ಹಾಸನ‌: ಕೋವಿಡ್ ಆಸ್ಪತ್ರೆ, ಕ್ವಾರಂಟೈನ್ ಕೇಂದ್ರಕ್ಕೆ ಸಚಿವರ ಭೇಟಿ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಚನ್ನರಾಯಪಟ್ಟಣ ತಾಲೂಕು ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದರು.

Vijaya Karnataka Web 9 Jun 2020, 3:32 pm
ಹಾಸನ:‌ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಇಂದು ಚನ್ನರಾಯಪಟ್ಟಣ ತಾಲೂಕು ಕೋವಿಡ್ ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
Vijaya Karnataka Web hassan
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ


ಹೊರ ರಾಜ್ಯದಿಂದ ಬರುವ ಎಲ್ಲರ ತಪಾಸಣೆ ಮಾಡಿ ವರದಿ ಬಂದ‌ ನಂತರವೇ ಸೋಂಕು ಇಲ್ಲದವರನ್ನು ಮನೆಗಳಿಗೆ ಕಳಿಸಿ . ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ ಎಂದು ಸಚಿವರು ಸೂಚನೆ ನೀಡಿದರು.

ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸಿ.ಇತರ ರೋಗಿಗಳಿ ಮೊದಲಿನಂತೆ ತಪಾಸಣೆ ಮತ್ತು ಚಿಕಿತ್ಸಾ ವ್ಯವಸ್ಥೆ ಮಂದುವರೆಸಿ ಎಂದು ಸಚಿವರು ಹೇಳಿದರು. ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಜಿಲ್ಲಾಧಿಕಾರಿ ಆರ್ .ಗಿರೀಶ್, ಜಿಲ್ಲಾ ಪಂಚಾಯತ್ ಸಿ.ಇ.ಒ ಪರಮೇಶ್ , ಉಪ ವಿಭಾಗಾಧಿಕಾರಿ ಡಾ ನವೀನ್ ಭಟ್, ತಹಶಿಲ್ದಾರ್ ಮಾರುತಿ ಮತ್ತಿತರರು ಹಾಜರಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ