ಆ್ಯಪ್ನಗರ

ಸಚಿವರ ಬೆಂಗಾವಲು ವಾಹನದಲ್ಲಿ ಹಣ ಸಾಗಣೆ: ತನಿಖೆ ಚುರುಕು

ಚುನಾವಣೆ ವೇಳೆ ಲೋಕೋಪಯೋಗಿ ಸಚಿವ ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಹಣ ಸಾಗಣೆ ಮಾಡಿದ ಪ್ರಕರಣ ಸಂಬಂಧ ಸ್ವತಂತ್ರವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಚುನಾವಣಾ ಆಯೋಗದ ಜಾರಿ ವಿಭಾಗದ ವಿಶೇಷಾಧಿಕಾರಿ ಮುನೀಶ್‌ ಮೌದ್ಗಿಲ್‌ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ವರದಿ ನೀಡಿದ್ದು, ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ತನಿಖೆ ಕೂಡ ನಡೆಸಿದರು.

Vijaya Karnataka 24 Apr 2019, 5:00 am
ಹಾಸನ: ಚುನಾವಣೆ ವೇಳೆ ಲೋಕೋಪಯೋಗಿ ಸಚಿವ ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಹಣ ಸಾಗಣೆ ಮಾಡಿದ ಪ್ರಕರಣ ಸಂಬಂಧ ಸ್ವತಂತ್ರವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಚುನಾವಣಾ ಆಯೋಗದ ಜಾರಿ ವಿಭಾಗದ ವಿಶೇಷಾಧಿಕಾರಿ ಮುನೀಶ್‌ ಮೌದ್ಗಿಲ್‌ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ವರದಿ ನೀಡಿದ್ದು, ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ತನಿಖೆ ಕೂಡ ನಡೆಸಿದರು.
Vijaya Karnataka Web money laundering in ministers inventory vehicle investigative is quick
ಸಚಿವರ ಬೆಂಗಾವಲು ವಾಹನದಲ್ಲಿ ಹಣ ಸಾಗಣೆ: ತನಿಖೆ ಚುರುಕು


ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಏ.16ರಂದು ಹೊಳೆನರಸೀಪುರ ಚೆನ್ನಾಂಬಿಕ ಚಿತ್ರಮಂದಿರದ ಎದುರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಹೆಸರಿನಲ್ಲಿ ಕೆಎ 01 ಎಂಎಚ್‌ 4477 ನೋಂದಣಿಯಾಗಿದ್ದ ಕಾರಿನಲ್ಲಿ 1.2 ಲಕ್ಷ ರೂ. ಹಣ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು. ಹಾಸನ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿ ಷರೀಫ್‌ ಮತ್ತವರ ತಂಡ ಶೋಧ ನಡೆಸಿ 1.2 ಲಕ್ಷ ರೂ. ಹಾಗೂ ಇನ್ನೋವಾ ವಾಹನದಿಂದ ವಶಪಡಿಸಿಕೊಂಡಿರುವ ಪ್ರಕರಣವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದರು. ಈ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಚುನಾವಣೆಗಾಗಿ ಹಣ ಸಾಗಿಸಲು ಪೊಲೀಸ್‌ ವಾಹನ ಬಳಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಇದು ಅತ್ಯಂತ ಗಂಭೀರ ಪ್ರಕರಣವಾಗಿದೆ. ಪೊಲೀಸ್‌ ಅಧಿಕಾರಿಗಳು ಶಾಮಿಲಾಗಿರುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಪ್ರಾಮಾಣಿಕ ಪೊಲೀಸ್‌ ಅಧಿಕಾರಿಯ ನಿಗಾದಲ್ಲಿ ಸ್ವತಂತ್ರ ತಂಡದಿಂದ ತನಿಖೆ ನಡೆಸಬೇಕು ಎಂದು ಮುನೀಶ್‌ ಮೌದ್ಗಿಲ್‌ ಏ.20 ರಂದು ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದ್ದಾರೆ.

ಸಚಿವರ ಬೆಂಗಾವಲು ಕಾರು: ಪೊಲೀಸರು ವಶಕ್ಕೆ ಪಡೆದ ಕಾರನ್ನು ಸಚಿವ ಎಚ್‌ಡಿ ರೇವಣ್ಣ ಬೆಂಗಾವಲಿಗಾಗಿ ನೀಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಮುನೀಶ್‌ ಮೌದ್ಗಿಲ್‌ ಏ.17ರ ಸುದ್ದಿಗೋಷ್ಠಿಯಲ್ಲಿ ಹಣ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದರು.

ವಿಡಿಯೋ ಚಿತ್ರೀಕರಣ: ಏ.16 ರಂದು ವಾಹನ ತಪಾಸಣೆ ನಡೆಸಿದ್ದು ಹಾಗೂ ಹಣ ವಶಪಡಿಸಿಕೊಂಡ ಸಂಪೂರ್ಣ ವಿಡಿಯೋ ಚಿತ್ರೀಕರಣವನ್ನು ತನಿಖಾಧಿಕಾರಿಗಳು ವೀಕ್ಷಿಸಿದ್ದಾರೆ.

------------

ಹೊಳೆನರಸೀಪುರದಲ್ಲಿ ಏ.16ರಂದು ಚನ್ನಾಂಬಿಕ ಚಿತ್ರಮಂದಿರದ ಎದುರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಹೆಸರಿನಲ್ಲಿ ನೋಂದಣಿಯಾದ ಕಾರಿನಲ್ಲಿ ಹಣ ಸಾಗಣೆ ಪ್ರಕರಣದ ತನಿಖೆಯನ್ನು ವಿಭಾಗದ ವಿಶೇಷಾಧಿಕಾರಿ ಮುನೀಶ್‌ ಮೌದ್ಗಿಲ್‌ ನಡೆಸಿದ್ದಾರೆ.
-ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಜಿಲ್ಲಾಧಿಕಾರಿ ಹಾಸನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ